Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...