Homeಮುಖಪುಟಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿ, "ಸಾಂಕ್ರಾಮಿಕ ರೋಗದ ಮಧ್ಯೆ ನೀಟ್ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ" ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತ್ತು.

- Advertisement -
- Advertisement -

ಇಂದು ಆರಂಭವಾಗಿರುವ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೆಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ತಮಿಳುನಾಡಿನ ತಿರುಚೆಂಗೋಡ್ ನಗರದ ವ್ಯಾಪಾರಿಯ ಮಗನಾದ ಮೋತಿಲಾಲ್ ಎಂಬ 20 ವರ್ಷದ ಯುವಕ ಕಳೆದ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಲಿಲ್ಲ. ಹಾಗಾಗಿ ಇಂದು ನಡೆಯುವ ಪರೀಕ್ಷೆಗೆ ಹಾಜರಾಗಬೇಕಿದ್ದ ಯುವಕ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ ಜೋತಿಶ್ರೀ ಮತ್ತು ಧರ್ಮಪುರಿಯ ವ್ಯಾಪಾರಿಯ ಮಗನಾದ ಆದಿತ್ಯ ಎಂಬ ವಿದ್ಯಾರ್ಥಿಗಳು ಸಹ ನಿನ್ನೆ ಶವವಾಗಿ ಪತ್ತೆಯಾಗಿದ್ದಾರೆ.

“ಕಳೆದ ವರ್ಷ ಪ್ರವೇಶ ಪರೀಕ್ಷೆ ಬರೆದು, ವೈಟಿಂಗ್ ಲಿಸ್ಟ್‌ಗಾಗಿ ಕಾಯುತ್ತಿದ್ದ ಮಧುರೈನ 19 ವರ್ಷದ ಯುವತಿ ಸೇರಿದಂತೆ, ಕಳೆದ ವರ್ಷ ಖಾಸಗೀ ಕಾಲೇಜಿನಲ್ಲಿಯೂ ಪ್ರವೇಶ ಸಿಗದ ರೈತನ ಮಗನಾದ ವಿಗ್ನೇಶ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜೋತಿಶ್ರೀ ಎನ್ನುವ ಯುವತಿ ಬರೆದಿರುವ ಆತ್ಮಹತ್ಯಾ ಪತ್ರದಲ್ಲಿ, “ನಾನು ಪರೀಕ್ಷೆಗೆ ಚೆನ್ನಾಗಿಯೇ ಸಿದ್ಧತೆ ಮಾಡಿಕೊಂಡಿದ್ದೇನೆ. ಆದರೂ ನನಗೆ ಭಯವಾಗುತ್ತಿದೆ. ಆದರೆ, ವೈದ್ಯಕೀಯ ಸೀಟ್ ಪಡೆಯದಿದ್ದರೆ, ನಾನು ಏನು ಮಾಡಲಿ” ಎಂದು ಬರೆದುಕೊಂಡಿದ್ದಾಳೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸದಿರುವಂತೆ ಅಥವಾ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿ, ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಸೀಟ್‌ಗಳನ್ನು ಹಂಚುವಂತೆ ತಮಿಳುನಾಡು ಕೇಳಿಕೊಂಡಿತ್ತು.

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಪಿಎಂಕೆ ಸಂಸ್ಥಾಪಕ ಎಸ್.ರಾಮದಾಸ್ ಇದಕ್ಕೆ ಸಂಬಂಧಿಸಿದಂತೆ, “ನೀಟ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬೇಕು. ಇದು ಮಾತ್ರ ಪರಿಹಾರ” ಎಂದು ಬುಧವಾರ ಹೇಳಿದ್ದರು.

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಪ್ರಬಲವಾಗಿ ಒತ್ತಾಯಿಸುತ್ತಿರುವವರಲ್ಲಿ ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಕೂಡ ಒಬ್ಬರು. “ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನವನ್ನು ಅಸ್ಥಿರಗೊಳಿಸುತ್ತದೆ” ಎಂದು ಅವರು ಹೇಳಿದ್ದರು.

ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿ, “ಸಾಂಕ್ರಾಮಿಕ ರೋಗದ ಮಧ್ಯೆ ನೀಟ್ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ” ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತ್ತು.

ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಕಳೆದ ಒಂದು ದಶಕದಿಂದ ತಿರಸ್ಕರಿಸುತ್ತಿರುವ ತಮಿಳುನಾಡು, “ಇದು ವಿದ್ಯಾರ್ಥಿಗಳನ್ನು ಒತ್ತಡಕ್ಕೆ ಸಿಲುಕಿಸುತ್ತದೆ ಮತ್ತು ಬಡ ವಿದ್ಯಾರ್ಥಿಗಳಿಗೆ ಈ ದುಬಾರಿ ಕೋಚಿಂಗ್ ಅನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೊಂಡುಬಂದಿದೆ.

ನೀಟ್‌ಗೂ ಮೊದಲು ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಸೀಟುಗಳನ್ನು ಪಡೆಯುತ್ತಿದ್ದರು. ಯುಪಿಎ ಆಡಳಿತದಲ್ಲಿ, ತಮಿಳುನಾಡು ರಾಜ್ಯವು ನೀಟ್‌ನಿಂದ ವಿನಾಯಿತಿಯನ್ನು ಪಡೆದಿತ್ತು. ಆದರೆ ಎನ್‌ಡಿಎ ಸರ್ಕಾರ ಈ ವಿನಾಯಿತಿಯನ್ನು ರದ್ದುಗೊಳಿಸಿದೆ.

ತಿರುಪ್ಪರಂಕುಂಡ್ರಂನ ಡಿಎಂಕೆ ಶಾಸಕ ಪಿ.ಸರವಣನ್, “ಖಿನ್ನತೆ ಮತ್ತು ನೀಟ್‌ನ ಭಯವು ತಮಿಳುನಾಡಿನಲ್ಲಿ ಮತ್ತೊಂದು ಜೀವವನ್ನು ಬಲಿ ತೆಗೆದುಕೊಂಡಿದೆ. ದೇಶಾದ್ಯಂತ ಏಕರೂಪದ ಶಾಲಾ ಪಠ್ಯಕ್ರಮವಿಲ್ಲ. ಆದರೂ ವೈದ್ಯಕೀಯ ಪ್ರವೇಶಕ್ಕಾಗಿ ರಾಷ್ಟ್ರವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿರುವುದು ತರ್ಕಬದ್ಧವಲ್ಲ” ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ದುರ್ಗಾ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ ಹೇಳಿದ್ದರು.

“412 ಸರ್ಕಾರಿ ತರಬೇತಿ ಕೇಂದ್ರಗಳ ಮೂಲಕ ಉಚಿತ ನೀಟ್ ಕೋಚಿಂಗ್ ಪಡೆದಿದ್ದ 19,000 ವಿದ್ಯಾರ್ಥಿಗಳಲ್ಲಿ ಯಾರೊಬ್ಬರೂ ಕಳೆದ ವರ್ಷ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಲಿಲ್ಲ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯ ಅಗತ್ಯವಿದೆ. ಆದರೆ ಇದಕ್ಕೆ ಭಾರಿ ವೆಚ್ಚ ಮಾಡಬೇಕಾಗುತ್ತದೆ. ತಮಿಳುನಾಡಿನಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವವರೆಗೆ ನೀಟ್ ಅನ್ನು ರದ್ದುಗೊಳಿಸಬೇಕು” ಎಂದು ಅವರು ಹೇಳಿದ್ದರು.

ಈ ಅನ್ಯಾಯದ ಸಾವುಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಮಧುರೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದಿ ಹಿಂದು ವರದಿ ಮಾಡಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...