Homeಕರ್ನಾಟಕKRS ಪಕ್ಷದಿಂದ 'ಚಲಿಸು ಕರ್ನಾಟಕ' ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ - ರವಿಕೃಷ್ಣ ರೆಡ್ಡಿ

- Advertisement -
- Advertisement -

ಕೊರೊನಾದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಆಶಾವಾದ, ಚೈತನ್ಯ ತುಂಬಲು ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ “ಚಲಿಸು ಕರ್ನಾಟಕ” ಎಂಬ 2700 ಕಿ.ಮೀ. ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಾದ್ಯಂತ 3 ಹಂತಗಳಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೆಪ್ಟೆಂಬರ್ 14 ರಿಂದು ಕೋಲಾರದಿಂದ ಮೊದಲ ಹಂತದ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

“ಇತ್ತೀಚಿನ ತಿಂಗಳುಗಳಲ್ಲಿ ಜನಜೀವನವು ಏಳುಬೀಳುಗಳೊಂದಿಗೆ ನಡೆಯುತ್ತಿದೆ. ಕೆಲವರದು ಸ್ತಬ್ಧವಾಗಿದ್ದರೆ, ಬಹುತೇಕರದು ಮುಗ್ಗರಿಸಿದೆ. ಇದನ್ನು ಸರಿಪಡಿಸುವಲ್ಲಿ ಮತ್ತು ಜನರ ಬದುಕನ್ನು ಮೇಲೆತ್ತುವಲ್ಲಿ ಸರ್ಕಾರಗಳು ಮತ್ತು ಅಧಿಕಾರ-ಕೇಂದ್ರಿತ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ದಾರುಣವಾಗಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಕಲ್ ಯಾತ್ರೆಯನ್ನು ಹಮ್ಮಿಕೊಂಡಿದೆ. ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ‘ಚಲಿಸು ಕರ್ನಾಟಕ’ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ” ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

“ಇಂತಹ ಚಾರಿತ್ರಿಕ ಯಾತ್ರೆಯು ತಮ್ಮ ಸಹಾಯವಿಲ್ಲದೆ ಸಾಧ್ಯವಾಗುವುದಿಲ್ಲ ಮತ್ತು ಅದು ಜನರಿಗೆ ಮುಟ್ಟದಿದ್ದರೆ ಸಾರ್ಥಕವೂ ಅಲ್ಲ. ಹಾಗಾಗಿ ತಾವು ಉದಾರ ಮನಸ್ಸಿನಿಂದ ನಮ್ಮ ಈ ಅಭಿಯಾನಕ್ಕೆ ಮತ್ತು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ದಯವಿಟ್ಟು ತಾವು ತಮ್ಮ ಕೈಲಾದಷ್ಟು ಧನಸಹಾಯ ಮಾಡಿ ಈ ಸೈಕಲ್ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಮತ್ತು ರಾಜ್ಯದ ಜನರಲ್ಲಿ ಭವಿಷ್ಯದ ಬಗ್ಗೆ ಆಶಾವಾದ ಮೂಡಿಸುವಲ್ಲಿ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣವನ್ನು ಬೆಂಬಲಿಸುವಲ್ಲಿ ತಮ್ಮ ಪಾಲೂ ಇರಲಿ” ಎಂದು ಅವರು ಮನವಿ ಮಾಡಿದ್ದಾರೆ.

“ಕಳೆದ ಆರೇಳು ತಿಂಗಳಿನಿಂದ ರಾಜ್ಯದ ಜನರದೂ ಸೇರಿದಂತೆ ಜಗತ್ತಿನಾದ್ಯಂತ ಬಹುತೇಕ ಜನರ ಬದುಕು ಅಯೋಮಯವಾಗಿದೆ, ಅನಿಶ್ಚಿತತೆಯಿಂದ ಕೂಡಿದೆ. ಕೆಲವರದು ಮಾತ್ರ ಅಷ್ಟೇನೂ ತೊಂದರೆಗಳಿಲ್ಲದೆ ನಡೆಯುತ್ತಿದ್ದರೆ, ಬಹುತೇಕರದು ಮುಗ್ಗರಿಸಿದೆ, ಸ್ತಬ್ಧವಾಗಿದೆ, ನಿಶ್ಚಲವಾಗಿದೆ. ಆದರೂ ಜೀವನ ನಡೆಯಲೇಬೇಕು. ಆಶಾವಾದದಿಂದ, ಕ್ರಿಯಾಶೀಲತೆಯಿಂದ, ಎಚ್ಚರಿಕೆಯಿಂದ ನಾವು ಮುನ್ನಡೆಯಬೇಕು, ಚಲಿಸಬೇಕು, ಜೀವನವನ್ನು ಕಟ್ಟಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕೊರೊನಾ ವೈರಸ್ ತಂದೊಡ್ಡಿರುವ ವಿಪತ್ತು, ಜನರ ಸಮಸ್ಯೆಗಳು ಮತ್ತು ಅದರ ಪರಿಹಾರಗಳು, ಸರ್ಕಾರ ಮಾಡಬೇಕಾಗಿರುವ ಕೆಲಸ, ಜನರ ಸಹಭಾಗಿತ್ವ ಮತ್ತು ಜವಾಬ್ದಾರಿ, ಮುಂತಾದ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಸ್ಥೈರ್ಯದಿಂದ ಮುನ್ನಡೆಯುವಂತೆ ಪ್ರೇರೇಪಿಸಲು ನಾಳೆಯಿಂದ ‘ಉಜ್ವಲ ಭವಿಷ್ಯದೆಡೆಗೆ, ಸುಭದ್ರ ಕರ್ನಾಟಕದೆಡೆಗೆ’ ಎಂಬ ಈ ಮಹತ್ವದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...