Homeಕರ್ನಾಟಕKRS ಪಕ್ಷದಿಂದ 'ಚಲಿಸು ಕರ್ನಾಟಕ' ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ - ರವಿಕೃಷ್ಣ ರೆಡ್ಡಿ

- Advertisement -
- Advertisement -

ಕೊರೊನಾದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಆಶಾವಾದ, ಚೈತನ್ಯ ತುಂಬಲು ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ “ಚಲಿಸು ಕರ್ನಾಟಕ” ಎಂಬ 2700 ಕಿ.ಮೀ. ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಾದ್ಯಂತ 3 ಹಂತಗಳಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೆಪ್ಟೆಂಬರ್ 14 ರಿಂದು ಕೋಲಾರದಿಂದ ಮೊದಲ ಹಂತದ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

“ಇತ್ತೀಚಿನ ತಿಂಗಳುಗಳಲ್ಲಿ ಜನಜೀವನವು ಏಳುಬೀಳುಗಳೊಂದಿಗೆ ನಡೆಯುತ್ತಿದೆ. ಕೆಲವರದು ಸ್ತಬ್ಧವಾಗಿದ್ದರೆ, ಬಹುತೇಕರದು ಮುಗ್ಗರಿಸಿದೆ. ಇದನ್ನು ಸರಿಪಡಿಸುವಲ್ಲಿ ಮತ್ತು ಜನರ ಬದುಕನ್ನು ಮೇಲೆತ್ತುವಲ್ಲಿ ಸರ್ಕಾರಗಳು ಮತ್ತು ಅಧಿಕಾರ-ಕೇಂದ್ರಿತ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ದಾರುಣವಾಗಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಕಲ್ ಯಾತ್ರೆಯನ್ನು ಹಮ್ಮಿಕೊಂಡಿದೆ. ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ‘ಚಲಿಸು ಕರ್ನಾಟಕ’ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ” ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

“ಇಂತಹ ಚಾರಿತ್ರಿಕ ಯಾತ್ರೆಯು ತಮ್ಮ ಸಹಾಯವಿಲ್ಲದೆ ಸಾಧ್ಯವಾಗುವುದಿಲ್ಲ ಮತ್ತು ಅದು ಜನರಿಗೆ ಮುಟ್ಟದಿದ್ದರೆ ಸಾರ್ಥಕವೂ ಅಲ್ಲ. ಹಾಗಾಗಿ ತಾವು ಉದಾರ ಮನಸ್ಸಿನಿಂದ ನಮ್ಮ ಈ ಅಭಿಯಾನಕ್ಕೆ ಮತ್ತು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ದಯವಿಟ್ಟು ತಾವು ತಮ್ಮ ಕೈಲಾದಷ್ಟು ಧನಸಹಾಯ ಮಾಡಿ ಈ ಸೈಕಲ್ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಮತ್ತು ರಾಜ್ಯದ ಜನರಲ್ಲಿ ಭವಿಷ್ಯದ ಬಗ್ಗೆ ಆಶಾವಾದ ಮೂಡಿಸುವಲ್ಲಿ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣವನ್ನು ಬೆಂಬಲಿಸುವಲ್ಲಿ ತಮ್ಮ ಪಾಲೂ ಇರಲಿ” ಎಂದು ಅವರು ಮನವಿ ಮಾಡಿದ್ದಾರೆ.

“ಕಳೆದ ಆರೇಳು ತಿಂಗಳಿನಿಂದ ರಾಜ್ಯದ ಜನರದೂ ಸೇರಿದಂತೆ ಜಗತ್ತಿನಾದ್ಯಂತ ಬಹುತೇಕ ಜನರ ಬದುಕು ಅಯೋಮಯವಾಗಿದೆ, ಅನಿಶ್ಚಿತತೆಯಿಂದ ಕೂಡಿದೆ. ಕೆಲವರದು ಮಾತ್ರ ಅಷ್ಟೇನೂ ತೊಂದರೆಗಳಿಲ್ಲದೆ ನಡೆಯುತ್ತಿದ್ದರೆ, ಬಹುತೇಕರದು ಮುಗ್ಗರಿಸಿದೆ, ಸ್ತಬ್ಧವಾಗಿದೆ, ನಿಶ್ಚಲವಾಗಿದೆ. ಆದರೂ ಜೀವನ ನಡೆಯಲೇಬೇಕು. ಆಶಾವಾದದಿಂದ, ಕ್ರಿಯಾಶೀಲತೆಯಿಂದ, ಎಚ್ಚರಿಕೆಯಿಂದ ನಾವು ಮುನ್ನಡೆಯಬೇಕು, ಚಲಿಸಬೇಕು, ಜೀವನವನ್ನು ಕಟ್ಟಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕೊರೊನಾ ವೈರಸ್ ತಂದೊಡ್ಡಿರುವ ವಿಪತ್ತು, ಜನರ ಸಮಸ್ಯೆಗಳು ಮತ್ತು ಅದರ ಪರಿಹಾರಗಳು, ಸರ್ಕಾರ ಮಾಡಬೇಕಾಗಿರುವ ಕೆಲಸ, ಜನರ ಸಹಭಾಗಿತ್ವ ಮತ್ತು ಜವಾಬ್ದಾರಿ, ಮುಂತಾದ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಸ್ಥೈರ್ಯದಿಂದ ಮುನ್ನಡೆಯುವಂತೆ ಪ್ರೇರೇಪಿಸಲು ನಾಳೆಯಿಂದ ‘ಉಜ್ವಲ ಭವಿಷ್ಯದೆಡೆಗೆ, ಸುಭದ್ರ ಕರ್ನಾಟಕದೆಡೆಗೆ’ ಎಂಬ ಈ ಮಹತ್ವದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...