Homeಮುಖಪುಟ'ನವ ಭಾರತ, ನವ ಬಿಹಾರ' ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

‘ನವ ಭಾರತ, ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ" ಎಂದು ಮೋದಿ ಹೇಳಿದರು.

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿರುವಾಗ, ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಅವರ ಪಾತ್ರ ಮಹತ್ತರವಾದದ್ದು ಎಂದು ಮೋದಿ ಕರೆದಿದ್ದಾರೆ.

ಸುಮಾರು 900 ಕೋಟಿ ಮೊತ್ತದ ಬೃಹತ್ ಪೆಟ್ರೋಲಿಯಂ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, “ಆಡಳಿತದಲ್ಲಿ ಸರಿಯಾದ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಬಿಹಾರ ರಾಜ್ಯ ತೋರಿಸಿಕೊಟ್ಟಿದೆ. ಇದರಿಂದಲೇ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿವೆ” ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ, ನಿತೀಶ್ ಕುಮಾರ್, ಸುಶೀಲ್ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

“ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಬಿಹಾರವು ಹಲವು ವರ್ಷಗಳವರೆಗೆ ಅಭಿವೃದ್ಧಿಯನ್ನು ಕಾಣದೆ ಹಿಂದುಳಿದಿತ್ತು. ರಸ್ತೆ ಸಂಪರ್ಕ ಮತ್ತು ಇಂಟರ್ನೆಟ್ ಸೌಲಭ್ಯದ ಕುರಿತು ಚರ್ಚಿಸದ ಕಾಲವೊಂದಿತ್ತು. ಭೂ ಕುಸಿತದ ರಾಜ್ಯವಾಗಿ ಬಿಹಾರ ಅನೇಕ ಸವಾಲುಗಳನ್ನು ಎದುರಿಸಿದೆ. ಆದರೀಗ ನಮ್ಮ ಮಹತ್ವದ ಯೋಜನೆಯಾದ ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

“ಕೊರೊನಾದ ಬಿಕ್ಕಟ್ಟಿನಿಂದ ಸೃಷ್ಟಿಯಾದ ಕೆಲವು ಸವಾಲುಗಳೂ ಸಹ ಬಿಹಾರದ ಜನರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ. ಜಾಗತಿಕ ಸಾಂಕ್ರಾಮಿಕ ರೊಗವು ದೇಶಕ್ಕೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿತು. ಆದರೂ ದೇಶ ನಿಂತಿಲ್ಲ, ಬಿಹಾರ ನಿಂತಿಲ್ಲ” ಎಂದು ಮೋದಿ ಹೇಳಿದರು.

“ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಬಿಹಾರವು ತುಂಬಾ ಮುಂದೆ ಸಾಗಿದೆ. ಬಿಹಾರದಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಒಂದು ಹಳ್ಳಿಗೆ 2-3 ಗಂಟೆಗಳ ಕಾಲ ವಿದ್ಯುತ್ ಸಿಕ್ಕರೆ ಸಾಕು ಎಂದು ಪರಿಗಣಿಸಲಾಗುತ್ತಿತ್ತು. ನಗರಗಳಿಗೂ ಸಹ 8-10 ಗಂಟೆಗಿಂತ ಹೆಚ್ಚಿನ ವಿದ್ಯುತ್ ಸಿಗುತ್ತಿರಲಿಲ್ಲ. ಆದರೆ ಇಂದು ಬಿಹಾರದಲ್ಲಿ ವಿದ್ಯುತ್ ಪೂರೈಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಪ್ರಧಾನಿ ಹೇಳಿದರು.

“ರಾಜ್ಯದ ಯುವಜನತೆಗೆ ಉತ್ತಮ ಶಿಕ್ಷಣದ ಅವಕಾಶಗಳಿವೆ. ಇಂದು ಬಿಹಾರದಲ್ಲಿ ಬೃಹತ್ ಶಿಕ್ಷಣ ಕೇಂದ್ರಗಳು ತೆರೆಯಲ್ಪಡುತ್ತಿವೆ. ಕೃಷಿ, ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಯುವಜನರ ಯಶಸ್ಸಿಗೆ ಸಹಾಯ ಮಾಡುತ್ತಿವೆ” ಎಂದು ಬಿಹಾರದಲ್ಲಿನ ಶಿಕ್ಷಣಾವಕಾಶಗಳನ್ನು ಮೋದಿ ಉಲ್ಲೇಖಿಸಿದರು.

ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

“ನಾವು ಬಿಹಾರದ ಪ್ರತಿಯೊಂದು ವಲಯದ ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಪ್ರತಿ ವಲಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ” ಎಂದು ಮೋದಿ ಹೇಳಿದರು.

ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಪಕ್ಷವು ಬಿಹಾರದ ಆಡಳಿತ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಒಂದು ಘಟಕವಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಮ್ ಮೋರ್ಚಾ, ಈ ತಿಂಗಳ ಆರಂಭದಲ್ಲಿ ಮೈತ್ರಿಕೂಟಕ್ಕೆ ಸೇರಿತ್ತು. ಲೋಕ ಜನಶಕ್ತಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ಎನ್‌ಡಿಎಯ ಇತರ ಎರಡು ಮೈತ್ರಿ ಪಕ್ಷಗಳಾಗಿವೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...