Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...