Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...