Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...