Homeಕರೋನಾ ತಲ್ಲಣಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಲಸಿಕೆಯ ಪರಿಣಾಮವನ್ನು ಪರೀಕ್ಷಿಸಲು ಸ್ವತಃ ನಾನೇ ಲಸಿಕೆ ತೆಗೆದುಕೊಳ್ಳಬೇಕೆನ್ನುವುದಾದರೆ, ಸಂತೋಷದಿಂದ ತೆಗೆದುಕೊಳ್ಳುತ್ತೇನೆ” ಎಂದು ಸಚಿವರು ಹೇಳಿದರು.

- Advertisement -
- Advertisement -

ಕೊರೊನಾ ಲಸಿಕೆ ಬಿಡುಗಡೆ ಮಾಡಲು ಇನ್ನೂ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ. ಮುಂದಿನ ವರ್ಷದ ಮೊದಲ ತ್ರೈಮಾಸಿಕದ ವೇಳೆಗೆ ಇದು ಸಿದ್ಧವಾಗಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಸಂವಾದ ಕಾರ್ಯಕ್ರಮವಾದ ‘ಸಂಡೇ ಸಂವಾದ’ದಲ್ಲಿ ಸಚಿವರು ಈ ಮಾತನ್ನು ಹೇಳಿದರು.

ಅತಿದೊಡ್ಡ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೊರೊನಾ ಲಸಿಕೆ ಪ್ರಯೋಗವನ್ನು ಬ್ರಿಟಿಷ್ ನಿಯಂತ್ರಕರಿಂದ ಹಿಂದಕ್ಕೆ ಪಡೆದು, ನಂತರ ಮತ್ತೆ ಪುನರಾರಂಭಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಸಚಿವರು ಈ ಹೇಳಿಕೆಯನ್ನು ನೀಡಿದ್ದಾರೆ.

“ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸುವಲ್ಲಿ ಸರ್ಕಾರ ಸಂಪೂರ್ಣ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಸಚಿವರು ಭರವಸೆ ನೀಡಿದರು. “ಲಸಿಕೆ ಸುರಕ್ಷತೆ, ವೆಚ್ಚ, ಈಕ್ವಿಟಿ, ಕೋಲ್ಡ್-ಚೈನ್ ಅವಶ್ಯಕತೆಗಳು, ಉತ್ಪಾದನಾ ಸಮಯಸೂಚಿಗಳು ಇತ್ಯಾದಿಗಳ ಬಗ್ಗೆಯೂ ತೀವ್ರವಾಗಿ ಚರ್ಚಿಸಲಾಗುತ್ತಿದೆ” ಎಂದು ಹರ್ಷವರ್ಧನ್ ಹೇಳಿದರು.

ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

“ಲಸಿಕೆ, ಒಮ್ಮೆ ಸಿದ್ಧವಾದರೆ, ಅದು ಹೆಚ್ಚು ಅಗತ್ಯವಿರುವವರಿಗೆ ಲಭ್ಯವಾಗಲಿದೆ. ಆದರೆ ಲಸಿಕೆಯ ಮೊದಲ ಪ್ರಮಾಣವನ್ನು ಸ್ವೀಕರಿಸಲು ಸಂತೋಷವಾಗುತ್ತದೆ” ಎಂದು ಸಚಿವರು ಹೇಳಿದರು.

ಸೋಷಿಯಲ್ ಮೀಡಿಯಾ ಬಳಕೆದಾರರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿ, ಕೊರೊನಾಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸಚಿವರು ತಮ್ಮ ಒಂದು ಗಂಟೆ ಸಂವಾದದಲ್ಲಿ ಚರ್ಚಿಸಿದರು.

* ಭಾರತದಲ್ಲಿ ಹಲವಾರು ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ಪ್ರಸ್ತುತ, ಯಾವುದು ಹೆಚ್ಚು ಪರಿಣಾಮಕಾರಿಯಾಗಿ ಹೊರಹೊಮ್ಮುತ್ತದೆ ಎಂಬುದನ್ನು ನಾವು ಊಹಿಸಲು ಸಾಧ್ಯವಿಲ್ಲ. ಆದರೆ 2021 ರ ಮೊದಲ ತ್ರೈಮಾಸಿಕದ ವೇಳೆಗೆ ನಾವು ಖಂಡಿತವಾಗಿಯೂ ಅದರ ಫಲಿತಾಂಶಗಳನ್ನು ತಿಳಿಯುತ್ತೇವೆ ಎಂದು ಸಚಿವ ಹರ್ಷವರ್ಧನ್ ಹೇಳಿದರು.

* ಲಸಿಕೆ ತಜ್ಞರ ಗುಂಪನ್ನು ಸ್ಥಾಪಿಸಲಾಗಿದೆ. ಇದು ಸಂಪೂರ್ಣ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಿದೆ. ಪ್ರಾಯೋಗಿಕ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಲಾಗಿದ್ದರೂ, ಸಮಯ ವ್ಯರ್ಥವಾಗದಂತೆ ತಯಾರಕರಿಗೆ ಸಾಮೂಹಿಕ ಉತ್ಪಾದನೆಯನ್ನು ಪ್ರಾರಂಭಿಸಲು ಸೂಚಿಸಲಾಗುವುದು ಎಂದು ಸಚಿವರು ಹೇಳಿದರು.

* ಲಸಿಕೆಯ ಪರಿಣಾಮವನ್ನು ಪರೀಕ್ಷಿಸಲು ಸ್ವತಃ ನಾನೇ ಲಸಿಕೆ ತೆಗೆದುಕೊಳ್ಳಬೇಕೆನ್ನುವುದಾದರೆ, ಸಂತೋಷದಿಂದ ತೆಗೆದುಕೊಳ್ಳುತ್ತೇನೆ” ಎಂದು ಸಚಿವರು ಹೇಳಿದರು.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...