Homeಎಕಾನಮಿಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜಿಎಸ್‌ಟಿ ಪರಿಹಾರ ಹಣವನ್ನು ನೀಡಲು ಸಾದ್ಯವಿಲ್ಲ ಎಂದು, ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದ್ದ ಸಾಲದ ಆಯ್ಕೆಯನ್ನು ದೇಶದ 13 ರಾಜ್ಯಗಳು ಒಪ್ಪಿಕೊಂಡಿವೆ.

ಆಂಧ್ರಪ್ರದೇಶ, ಬಿಹಾರ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮೇಘಾಲಯ, ಸಿಕ್ಕಿಂ, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾ ರಾಜ್ಯಗಳು ಕೇಂದ್ರ ಸರ್ಕಾರದ ಸಾಲ ಪಡೆಯುವಿಕೆಯ 1ನೇ ಆಯ್ಕೆಯ ಪ್ರಸ್ತಾವವನ್ನು ಒಪ್ಪೊಕೊಂಡಿವೆ. ಆದರೆ ಮಣಿಪುರ ಮಾತ್ರ ಆಯ್ಕೆ 2 ಅನ್ನು ಆರಿಸಿದೆ.

ಇನ್ನೂ ಆರು ರಾಜ್ಯಗಳಾದ, ಗೋವಾ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಹಿಮಾಚಲ ಪ್ರದೇಶ – ಒಂದು ಅಥವಾ ಎರಡು ದಿನಗಳಲ್ಲಿ ತಮ್ಮ ಆಯ್ಕೆಯನ್ನು ನೀಡಲಿವೆ ಎಂಬುದನ್ನು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೆಲವು ರಾಜ್ಯಗಳು ತಮ್ಮ ಅಭಿಪ್ರಾಯಗಳನ್ನು ಜಿಎಸ್‌ಟಿ ಕೌನ್ಸಿಲ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಆಯ್ಕೆಗಳ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಗಸ್ಟ್ 27 ರಂದು ನಡೆದ ಸಭೆಯಲ್ಲಿ ಜಿಎಸ್‌ಟಿ ಕೌನ್ಸಿಲ್ ಈ ಎರಡು ಆಯ್ಕೆಗಳನ್ನು ನಿರ್ಧರಿಸಿತ್ತು.

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದರು.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದರು. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದರು.”

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...