Homeಕರ್ನಾಟಕಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; 'ರಸೋಕಿನ' ತಂಡದಿಂದ ವಿಶಿಷ್ಟ ಪ್ರತಿರೋಧ

ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

"ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ" ಎಂದು ತಂಡದ ಕಿರಣ್.ಬಿ.ಕೆ ಹೇಳಿದರು. 

- Advertisement -
- Advertisement -

‘ರಸೋಕಿನ’ ತಂಡವು, “ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ” ಎಂಬ ಪೋಸ್ಟರ್ ತಯಾರಿಸಿ, ಹಿಂದಿ ದಿವಸ್‌ಗೆ ವಿಶಿಷ್ಟವಾದ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದೆ. ಸಧ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಇದು ವೈರಲ್ ಆಗುತ್ತಿದೆ.

ಮೈಸೂರಿನ ಸಮಾನ ಮನಸ್ಕ ಗೆಳೆಯರು ಒಟ್ಟುಗೂಡಿ ಆರಂಭಿಸಿರುವ ರಸೋಕಿನ ತಂಡವು, ಕನ್ನಡದ ಕಂಪನ್ನು ಪಸರಿಸುವ ಸಲುವಾಗಿ ಕೆಲಸ ಮಾಡುತ್ತಿದೆ.

ಸಿನಿಮಾ, ಸಂಗೀತ, ಸಾಹಿತ್ಯ, ರಂಗಭೂಮಿಗೆ ಸಂಬಂಧಿಸಿದಂತೆ ವಿಭಿನ್ನ ರೀತಿಯಲ್ಲಿ ಪೋಸ್ಟರ್‌ಗಳನ್ನು ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವುದರೊಟ್ಟಿಗೆ, ವಿಶಿಷ್ಟವಾದ ಸಾಹಿತ್ಯಿಕ ವಿನ್ಯಾಸಗಳುಳ್ಳ ಕನ್ನಡದ ಟೀ-ಶರ್ಟ್‌ಗಳ ತಯಾರಿಕೆಯನ್ನೂ ಮಾಡುತ್ತಿದ್ದಾರೆ. ವಾಲ್‌ಫ್ರೇಮ್, ಗ್ರೀಟಿಂಗ್ಸ್‌, ಪೋಸ್ಟರ್‌ಗಳನ್ನು ತಯಾರಿಸಿ ಒಂದು ಉತ್ಪನ್ನವಾಗಿಯೂ ಮಾರಾಟ ಮಾಡುತ್ತಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಇದೀಗ ಹಿಂದಿ ದಿವಸ್‌ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ, ಕನ್ನಡದ ಪ್ರಮುಖ ಕವಿ ಜಿ.ಪಿ.ರಾಜರತ್ನಂ ಬರೆದಿರುವ ಪ್ರಖ್ಯಾತ ಸಾಲೊಂದನ್ನು ಬಳಸಿಕೊಂಡು ಪೋಸ್ಟರ್ ತಯಾರಿಸಿದ್ದಾರೆ. ಹಿಂದಿ ಹೇರಿಕೆಯನ್ನು ವಿರೋಧಿಸುವ ವಿಶಿಷ್ಟ ಪ್ರತಿಭಟನೆಗಳಲ್ಲಿ ಇದೂ ಒಂದು.

ಇದರೊಟ್ಟಿಗೆ, ಕನ್ನಡ ಮತ್ತು ಕಲೆಗೆ ಕೊಡುಗೆ ನೀಡಿರುವವರ ನೆನಕೆಗಾಗಿ, ಅವರ ಜನ್ಮದಿನದ ಗ್ರೀಟಿಂಗ್ಸ್‌‌ಗಳನ್ನು ವಿನ್ಯಾಸಗೊಳಿಸುತ್ತಾರೆ. ಇದು ಈಗಾಗಲೇ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ರಸೋಕಿನ ತಂಡದ ನನಿತ್.ಬಿ.ಎಸ್ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ನಮ್ಮ ಪ್ರತಿಕ್ರಿಯೆಯಲ್ಲಿ ವಿಶೇಷತೆಯೇನಿಲ್ಲ. ನಮ್ಮ ನಿಲುವನ್ನು ಈ ಪೋಸ್ಟರ್ ಮುಖಾಂತರವೇ ಹೇಳಿದ್ದೇವೆ. ಹಿಂದಿ ದಿವಸ್ ಆಚರಿಸ್ತೀರ. ಆಚರಿಸಿಕೊಳ್ಳಿ. ಅದಕ್ಕೆ ನಮ್ಮ ವಿರೋಧವೇನಿಲ್ಲ.
ನಮ್ಮ ವಿರೋಧವಿರುವುದು ಕನ್ನಡನಾಡಿನಲ್ಲಿ ‘ಹಿಂದಿ ದಿವಸ್’ ಆಚರಣೆ ಮಾಡುವುದರ ಬಗ್ಗೆ. ಕನ್ನಡ ನಾಡಿನ ಮೇಲೆ ಇದು ಹಿಂದಿ ಹೇರಿಕೆಯಲ್ಲದೆ ಮತ್ತಿನ್ನೇನು ಆಗಿರಲಾರದು” ಎಂದು ಹೇಳಿದರು.

ತಂಡದ ಮತ್ತೊಬ್ಬರಾದ ಕಿರಣ್.ಬಿ.ಕೆ ಪ್ರತಿಕ್ರಿಯಿಸಿ, “ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ” ಎಂದು ಹೇಳಿದರು. 

ದೇಶದಲ್ಲಿ ಹಿಂದಿ ಹೇರಿಕೆಯ ಸಂಚು ವ್ಯಾಪಕವಾಗಿ ನಡೆಯುತ್ತಿದ್ದು, ಹಲವು ಜನ ಪ್ರಗತಿಪರ ಚಿಂತನೆಯುಳ್ಳವರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಅನೇಕರು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...