Homeಕರ್ನಾಟಕಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; 'ರಸೋಕಿನ' ತಂಡದಿಂದ ವಿಶಿಷ್ಟ ಪ್ರತಿರೋಧ

ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

"ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ" ಎಂದು ತಂಡದ ಕಿರಣ್.ಬಿ.ಕೆ ಹೇಳಿದರು. 

- Advertisement -
- Advertisement -

‘ರಸೋಕಿನ’ ತಂಡವು, “ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ” ಎಂಬ ಪೋಸ್ಟರ್ ತಯಾರಿಸಿ, ಹಿಂದಿ ದಿವಸ್‌ಗೆ ವಿಶಿಷ್ಟವಾದ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದೆ. ಸಧ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಇದು ವೈರಲ್ ಆಗುತ್ತಿದೆ.

ಮೈಸೂರಿನ ಸಮಾನ ಮನಸ್ಕ ಗೆಳೆಯರು ಒಟ್ಟುಗೂಡಿ ಆರಂಭಿಸಿರುವ ರಸೋಕಿನ ತಂಡವು, ಕನ್ನಡದ ಕಂಪನ್ನು ಪಸರಿಸುವ ಸಲುವಾಗಿ ಕೆಲಸ ಮಾಡುತ್ತಿದೆ.

ಸಿನಿಮಾ, ಸಂಗೀತ, ಸಾಹಿತ್ಯ, ರಂಗಭೂಮಿಗೆ ಸಂಬಂಧಿಸಿದಂತೆ ವಿಭಿನ್ನ ರೀತಿಯಲ್ಲಿ ಪೋಸ್ಟರ್‌ಗಳನ್ನು ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವುದರೊಟ್ಟಿಗೆ, ವಿಶಿಷ್ಟವಾದ ಸಾಹಿತ್ಯಿಕ ವಿನ್ಯಾಸಗಳುಳ್ಳ ಕನ್ನಡದ ಟೀ-ಶರ್ಟ್‌ಗಳ ತಯಾರಿಕೆಯನ್ನೂ ಮಾಡುತ್ತಿದ್ದಾರೆ. ವಾಲ್‌ಫ್ರೇಮ್, ಗ್ರೀಟಿಂಗ್ಸ್‌, ಪೋಸ್ಟರ್‌ಗಳನ್ನು ತಯಾರಿಸಿ ಒಂದು ಉತ್ಪನ್ನವಾಗಿಯೂ ಮಾರಾಟ ಮಾಡುತ್ತಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಇದೀಗ ಹಿಂದಿ ದಿವಸ್‌ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ, ಕನ್ನಡದ ಪ್ರಮುಖ ಕವಿ ಜಿ.ಪಿ.ರಾಜರತ್ನಂ ಬರೆದಿರುವ ಪ್ರಖ್ಯಾತ ಸಾಲೊಂದನ್ನು ಬಳಸಿಕೊಂಡು ಪೋಸ್ಟರ್ ತಯಾರಿಸಿದ್ದಾರೆ. ಹಿಂದಿ ಹೇರಿಕೆಯನ್ನು ವಿರೋಧಿಸುವ ವಿಶಿಷ್ಟ ಪ್ರತಿಭಟನೆಗಳಲ್ಲಿ ಇದೂ ಒಂದು.

ಇದರೊಟ್ಟಿಗೆ, ಕನ್ನಡ ಮತ್ತು ಕಲೆಗೆ ಕೊಡುಗೆ ನೀಡಿರುವವರ ನೆನಕೆಗಾಗಿ, ಅವರ ಜನ್ಮದಿನದ ಗ್ರೀಟಿಂಗ್ಸ್‌‌ಗಳನ್ನು ವಿನ್ಯಾಸಗೊಳಿಸುತ್ತಾರೆ. ಇದು ಈಗಾಗಲೇ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ರಸೋಕಿನ ತಂಡದ ನನಿತ್.ಬಿ.ಎಸ್ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ನಮ್ಮ ಪ್ರತಿಕ್ರಿಯೆಯಲ್ಲಿ ವಿಶೇಷತೆಯೇನಿಲ್ಲ. ನಮ್ಮ ನಿಲುವನ್ನು ಈ ಪೋಸ್ಟರ್ ಮುಖಾಂತರವೇ ಹೇಳಿದ್ದೇವೆ. ಹಿಂದಿ ದಿವಸ್ ಆಚರಿಸ್ತೀರ. ಆಚರಿಸಿಕೊಳ್ಳಿ. ಅದಕ್ಕೆ ನಮ್ಮ ವಿರೋಧವೇನಿಲ್ಲ.
ನಮ್ಮ ವಿರೋಧವಿರುವುದು ಕನ್ನಡನಾಡಿನಲ್ಲಿ ‘ಹಿಂದಿ ದಿವಸ್’ ಆಚರಣೆ ಮಾಡುವುದರ ಬಗ್ಗೆ. ಕನ್ನಡ ನಾಡಿನ ಮೇಲೆ ಇದು ಹಿಂದಿ ಹೇರಿಕೆಯಲ್ಲದೆ ಮತ್ತಿನ್ನೇನು ಆಗಿರಲಾರದು” ಎಂದು ಹೇಳಿದರು.

ತಂಡದ ಮತ್ತೊಬ್ಬರಾದ ಕಿರಣ್.ಬಿ.ಕೆ ಪ್ರತಿಕ್ರಿಯಿಸಿ, “ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ” ಎಂದು ಹೇಳಿದರು. 

ದೇಶದಲ್ಲಿ ಹಿಂದಿ ಹೇರಿಕೆಯ ಸಂಚು ವ್ಯಾಪಕವಾಗಿ ನಡೆಯುತ್ತಿದ್ದು, ಹಲವು ಜನ ಪ್ರಗತಿಪರ ಚಿಂತನೆಯುಳ್ಳವರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಅನೇಕರು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...