Homeಮುಖಪುಟಜೆಇಇ-ನೀಟ್ 'ಮನುನೀತಿ' ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

"ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ" ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನಲ್ಲಿ ಹಲವು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ, ಈ ಪ್ರವೇಶ ಪರೀಕ್ಷೆಗಳನ್ನು “ಮನುನೀತಿ”ಯ ಪರೀಕ್ಷೆಗಳು ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿರುವ ಪತ್ರದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ನೀಟ್ ಪರೀಕ್ಷೆ ಮುಗಿದ ಕೆಲವು ಗಂಟೆಗಳ ನಂತರ, ಭಾನುವಾರ ಸಂಜೆ ಪತ್ರವೊಂದನ್ನು ಟ್ವೀಟ್ ಮಾಡಿ, “ಸರ್ಕಾರದ ಮೇಲೆ ಭಾರೀ ಪ್ರಮಾಣದಲ್ಲಿ ಒತ್ತಡ ಹಾಕಿ, ನೀಟ್ ವಿರುದ್ಧ ಏಕೀಕೃತ ಧ್ವನಿಯೆತ್ತಲು” ಕರೆ ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ಸಂಜೆ ಬಿಡುಗಡೆ ಮಾಡಿದ ಪತ್ರದಲ್ಲಿ, “ಜೀವಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಪರೀಕ್ಷೆಯನ್ನು ಬರೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಡುತ್ತಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜನರಲ್ಲಿನ ಅಸಮಾನತೆಗಳನ್ನು ಬಹಿರಂಗಗೊಳಿಸುವ ಕಾನೂನುಗಳನ್ನು ತಂದಿದ್ದಕ್ಕಾಗಿ ಸರ್ಕಾರವನ್ನು ದೂಷಿಸಿದ ಅವರು, “ಶಿಕ್ಷಣ ನೀತಿಗಳನ್ನು ರೂಪಿಸುವವರಿಗೆ ಬಡವರು ಮತ್ತು ದೀನ ದಲಿತರ ಬಗೆಗಿನ ವಾಸ್ತವಾಂಶಗಳ ಬಗ್ಗೆ ಅರಿವಿಲ್ಲ” ಎಂದು ಆರೋಪಿಸಿದ್ದಾರೆ.

“ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ” ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಆತ್ಮಹತ್ಯೆಗಳ ಸುದ್ದಿ ಮಾಧ್ಯಮಗಳಲ್ಲಿ ನಿರ್ದಿಷ್ಟ ದಿನದ ಚರ್ಚೆಗಳಿಗೆ ಸೀಮಿತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರು ಬರೆದಿರುವ ಟಿಪ್ಪಣಿಗಳಲ್ಲಿಯೂ ಸಹ ಕಾಗುಣಿತ ತಪ್ಪುಗಳನ್ನು ಹುಡುಕುವ ‘ಚಾಣಕ್ಯರು’ ಟಿವಿಯಲ್ಲಿ ಬಿಸಿ-ಬಿಸಿ ಚರ್ಚೆಗಳಲ್ಲಿ ತೊಡಗುತ್ತಿದ್ದಾರೆ” ಎಂದು ಮಾಧ್ಯಮಗಳ ವಿರುದ್ಧವೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಇಂತಹ ಪರೀಕ್ಷೆಗಳು ‘ಮನುನೀತಿ’ಯ ಪರೀಕ್ಷೆಗಳಾಗಿದ್ದು, ಇದು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೇ, ಅವರ ಜೀವನವನ್ನೂ ಕಸಿದುಕೊಳ್ಳುತ್ತದೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಇದು ಜೀವಾವಧಿ ಶಿಕ್ಷೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಮಹಾಭಾರತದ ಕಥೆಯೊಂದನ್ನು ಉಲ್ಲೇಖಿಸಿ, ’’ಅಂದು ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಕೇಳಿದ್ದರು. ಇಂದಿನ ಆಧುನಿಕ ದ್ರೋಣಾಚಾರ್ಯರು, 6ನೇ ತರಗತಿಯ ಮಗುವನ್ನು ಪರೀಕ್ಷೆ ಬರೆದು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ. ಇದನ್ನು ಸಾಬೀತುಪಡಿಸಿ ಮುಂದೆ ಹಾದುಹೋಗುವವರಿಗೆ ನೀಟ್ ಎಂಬ ಶಸ್ತ್ರಾಸ್ತಗಳು ಎದುರಾಗುತ್ತವೆ” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ನಂತರ ತಮಿಳುನಾಡಿನಲ್ಲಿ ಅಕ್ರೋಷ ಭುಗಿಲೆದ್ದು, ಹಲವರು ನೀಟ್ ವಿರುದ್ಧ ಧನಿಯೆತ್ತಿ, ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ನಿನ್ನೆ #Govt_Killed_NEET_Students ಎಂದು ಟ್ರೆಂಡಿಂಗ್ ಆಗಿತ್ತು.

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು ನಟ ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ಪ್ರಾರಂಭಿಸಲು ಕೋರಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌ನಲ್ಲಿ #TNStandWithSuriya ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 65 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...