Homeಮುಖಪುಟಜೆಇಇ-ನೀಟ್ 'ಮನುನೀತಿ' ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

"ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ" ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನಲ್ಲಿ ಹಲವು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ, ಈ ಪ್ರವೇಶ ಪರೀಕ್ಷೆಗಳನ್ನು “ಮನುನೀತಿ”ಯ ಪರೀಕ್ಷೆಗಳು ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿರುವ ಪತ್ರದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ನೀಟ್ ಪರೀಕ್ಷೆ ಮುಗಿದ ಕೆಲವು ಗಂಟೆಗಳ ನಂತರ, ಭಾನುವಾರ ಸಂಜೆ ಪತ್ರವೊಂದನ್ನು ಟ್ವೀಟ್ ಮಾಡಿ, “ಸರ್ಕಾರದ ಮೇಲೆ ಭಾರೀ ಪ್ರಮಾಣದಲ್ಲಿ ಒತ್ತಡ ಹಾಕಿ, ನೀಟ್ ವಿರುದ್ಧ ಏಕೀಕೃತ ಧ್ವನಿಯೆತ್ತಲು” ಕರೆ ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ಸಂಜೆ ಬಿಡುಗಡೆ ಮಾಡಿದ ಪತ್ರದಲ್ಲಿ, “ಜೀವಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಪರೀಕ್ಷೆಯನ್ನು ಬರೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಡುತ್ತಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜನರಲ್ಲಿನ ಅಸಮಾನತೆಗಳನ್ನು ಬಹಿರಂಗಗೊಳಿಸುವ ಕಾನೂನುಗಳನ್ನು ತಂದಿದ್ದಕ್ಕಾಗಿ ಸರ್ಕಾರವನ್ನು ದೂಷಿಸಿದ ಅವರು, “ಶಿಕ್ಷಣ ನೀತಿಗಳನ್ನು ರೂಪಿಸುವವರಿಗೆ ಬಡವರು ಮತ್ತು ದೀನ ದಲಿತರ ಬಗೆಗಿನ ವಾಸ್ತವಾಂಶಗಳ ಬಗ್ಗೆ ಅರಿವಿಲ್ಲ” ಎಂದು ಆರೋಪಿಸಿದ್ದಾರೆ.

“ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ” ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಆತ್ಮಹತ್ಯೆಗಳ ಸುದ್ದಿ ಮಾಧ್ಯಮಗಳಲ್ಲಿ ನಿರ್ದಿಷ್ಟ ದಿನದ ಚರ್ಚೆಗಳಿಗೆ ಸೀಮಿತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರು ಬರೆದಿರುವ ಟಿಪ್ಪಣಿಗಳಲ್ಲಿಯೂ ಸಹ ಕಾಗುಣಿತ ತಪ್ಪುಗಳನ್ನು ಹುಡುಕುವ ‘ಚಾಣಕ್ಯರು’ ಟಿವಿಯಲ್ಲಿ ಬಿಸಿ-ಬಿಸಿ ಚರ್ಚೆಗಳಲ್ಲಿ ತೊಡಗುತ್ತಿದ್ದಾರೆ” ಎಂದು ಮಾಧ್ಯಮಗಳ ವಿರುದ್ಧವೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಇಂತಹ ಪರೀಕ್ಷೆಗಳು ‘ಮನುನೀತಿ’ಯ ಪರೀಕ್ಷೆಗಳಾಗಿದ್ದು, ಇದು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೇ, ಅವರ ಜೀವನವನ್ನೂ ಕಸಿದುಕೊಳ್ಳುತ್ತದೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಇದು ಜೀವಾವಧಿ ಶಿಕ್ಷೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಮಹಾಭಾರತದ ಕಥೆಯೊಂದನ್ನು ಉಲ್ಲೇಖಿಸಿ, ’’ಅಂದು ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಕೇಳಿದ್ದರು. ಇಂದಿನ ಆಧುನಿಕ ದ್ರೋಣಾಚಾರ್ಯರು, 6ನೇ ತರಗತಿಯ ಮಗುವನ್ನು ಪರೀಕ್ಷೆ ಬರೆದು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ. ಇದನ್ನು ಸಾಬೀತುಪಡಿಸಿ ಮುಂದೆ ಹಾದುಹೋಗುವವರಿಗೆ ನೀಟ್ ಎಂಬ ಶಸ್ತ್ರಾಸ್ತಗಳು ಎದುರಾಗುತ್ತವೆ” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ನಂತರ ತಮಿಳುನಾಡಿನಲ್ಲಿ ಅಕ್ರೋಷ ಭುಗಿಲೆದ್ದು, ಹಲವರು ನೀಟ್ ವಿರುದ್ಧ ಧನಿಯೆತ್ತಿ, ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ನಿನ್ನೆ #Govt_Killed_NEET_Students ಎಂದು ಟ್ರೆಂಡಿಂಗ್ ಆಗಿತ್ತು.

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು ನಟ ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ಪ್ರಾರಂಭಿಸಲು ಕೋರಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌ನಲ್ಲಿ #TNStandWithSuriya ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 65 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...