Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...