Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...