Homeಕರ್ನಾಟಕಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯಿದೆ ತಿದ್ದುಪಡಿ `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ.

- Advertisement -
- Advertisement -

’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಆಯೋಜಿಸಿರುವ ರಾಜ್ಯವ್ಯಾಪಿ ಜನಜಾಗೃತಿ ಕಾರ್ಯಕ್ರಮದ ಜಾಥಾವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ದೇವರಾಜ್ ಅರಸು ಅವರ ಸಮಾಧಿಯ ಬಳಿ ಉಧ್ಘಾಟನೆ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊಡಿಸಿರುವುದನ್ನು ವಿರೋಧಿಸಿ ’ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ನೇತೃತ್ವದಲ್ಲಿ ರೈತರು, ದಲಿತರು, ಕೃಷಿ ಕಾರ್ಮಿಕರು ರಾಜ್ಯದಾದ್ಯಂತ ಈ ಹೋರಾಟವನ್ನು ನಡೆಸಲಿದ್ದಾರೆ.

ಜಾಥಾವನ್ನು ಉದ್ಘಾಟನೆ ಮಾಡಿದ ಸಸಿಕಾಂತ್ ಸೆಂಥಿಲ್, ದಿವಂಗತ ದೇವರಾಜ್ ಅರಸ್ ಅವರು ಕರ್ನಾಟಕದಲ್ಲಿ ಭೂಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ ಶ್ರೇಷ್ಟ ರಾಜಕಾರಣಿ. ಬಡವರಿಗಾಗಿ, ರೈತರಿಗಾಗಿ ಜಾರಿಗೆ ತಂದ ಈ ಕಾನೂನು ಇಂದಿಗೂ ರೈತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ. ಇಂತಹ ಕಾನೂನನ್ನು ರಾಜ್ಯದ ಬಿಜೆಪಿ ಸರ್ಕಾರ ಬುಡಮೇಲು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳುವ ಮೂಲಕ ಕೃಷಿ ಭೂಮಿಯಲ್ಲಿ ದುಡಿಯುವ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡುವ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಇಂದರಿಂದಾಗಿ ರೈತರು ತಮ್ಮ ಬದುಕು ಕಟ್ಟಿಕೊಂಡರು. ಇಂತಹ ಕಾನೂನು ದೇಶದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಇದೊಂದು ಕ್ರಾಂತಿಕಾರಕ ಕಾನೂನು ಎಂದು ಸೆಂಥಿಲ್‌ ಹೇಳಿದರು.

"ಬಡಜನರ ಭೂಮಿ ವಸತಿ ಹೋರಾಟಕ್ಕೆ ಮರು ಚಾಲನೆ" ರಾಜ್ಯವ್ಯಾಪಿ ಜನಜಾಗೃತಿ ಜಾಥಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದೆ. ಹಿರಿಯ‌ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿ ಅವರು ಚಾಲನಾ ಸಂದೇಶ ನೀಡಲಿದ್ದಾರೆ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂದಿಲ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವರು ಹೋರಾಟಗಾರರು ಉಪಸ್ಥಿತರಿರಲಿದ್ದಾರೆ.

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Monday, September 14, 2020

ಈ ಕಾನೂನು ಇಪ್ಪತ್ತೊಂದನೇ ಶತಮಾನದಲ್ಲೂ ಕೂಡ ರೈತರಿಗೆ ಗೌರವ ತರುವ ಕಾನೂನಾಗಿದ್ದು, ಬಡವರಿಗೆ ಬದುಕು ಕೊಡುತ್ತದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಕಾಲವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಾನೂನನ್ನು ಬದಲಾಯಿಸುತ್ತಾರೆಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬಗ್ಗೆ ನನಗೆ ಯಾವುದೇ ಅಭಿಪ್ರಾಯವಿಲ್ಲ. ಕೇಂದ್ರ ಸರ್ಕಾರ ದೇಶವನ್ನು ಕರೆದೊಯ್ಯುತ್ತಿರುವ ದಾರಿ, ಬಡಜನರನ್ನು ನಡೆಸಿಕೊಳ್ಳುವ ರೀತಿ ಎಲ್ಲವೂ ತಿಳಿದಿದೆ. ಅದನ್ನು ವಿರೋಧಿಸಿಯೇ ನಾನು ರಾಜಿನಾಮೆ ನೀಡಿದೆ. ಆದರೆ, ಕರ್ನಾಟಕ ಸರ್ಕಾರ ಈ ರೀತಿ ಮಾಡುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತರ ಹಾಗೂ ಬಡಜನರ ವಿರೋಧಿಯಾಗಿ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ. ಕೆಲವು ಕಾನೂನುಗಳನ್ನು ತೆಗೆದು ಹಾಕಿದ್ದಾರೆ. ಇದನ್ನು ಜನರು ಒಪ್ಪಲು ಸಾಧ್ಯವಿಲ್ಲ. ಕೊರೊನಾ ಸಮಯವನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೈ ಬಾಯಿ ಮುಚ್ಚಿ ಇಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಇದು `ಡ್ಯಾಮೇಜಿಂಗ್’ ತಿದ್ದುಪಡಿ ಎಂದೇ ಹೇಳಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಚರ್ಚೆ ಆಗಬೇಕು, ಜನರ ಅಭಿಪ್ರಾಯಗಳನ್ನು ಕೇಳಬೇಕು ಆದರೆ ಇವತ್ತು ಅಂತಹ ಯಾವುದೇ ಚರ್ಚೆಗಳನ್ನು ಮಾಡದೇ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಎಸೆಸ್ಶಿಯಲ್ ಕಮೊಡಿಟೀಸ್ ಆಕ್ಟ್, ಎಪಿಎಂಸಿ ಆಕ್ಟ್, ಕಾಂಟ್ರಾಕ್ಟ್‌ ಫಾರ್ಮಿಂಗ್-ಮೂರು ಕಾನೂನುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಲ್ಯಾಂಡ್ ಸೀಲಿಂಗ್ ತೆಗೆಯಲಾಗಿದೆ. ಉದ್ಯಮಿಗಳಿಗೆ ಅನುಕೂಲವಾಗುವಂತೆ ಬದಲಾವಣೆಗಳನ್ನು ತಂದುಬಿಟ್ಟಿದ್ದಾರೆ. ಸರ್ಕಾರ ಬಡವರಿಗಾಗಿ ಮಾಡಿರುವ ಕಾನೂನುಗಳು ಇವು ಎಂದು ಹೇಳುತ್ತವೆ. ಆದರೆ, ರೈತರು ಇವತ್ತು 5 ಎಕರೆ ಭೂಮಿಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಂಟು-ಹತ್ತು ವರ್ಷಗಳಲ್ಲಿ ಒಂದು ಎಕರೆ, ಎರಡು ಎಕರೆ ರೈತರ ಭೂಮಿ ಇರುತ್ತದೆ ಎನ್ನುವುದು ನನಗೆ ಅನುಮಾನ. ಎಲ್ಲಾ ರೈತರು ಕೂಡ ತಮ್ಮ ಹೊಲದಲ್ಲೇ ಕೂಲಿ ಕಾರ್ಮಿಕರಾಗುವ ಪರಿಸ್ಥಿತಿ ಬಂದಿದೆ. ಈಗಾಗಲೇ ಹಲವೆಡೆ ಇಂತಹ ಸ್ಥಿತಿ ಬಂದೊದಗಿದೆ. ನಮ್ಮ ರೈತರ ಬಳಿ ಭೂಮಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಶೇ.90 ರಷ್ಟು ಜನರಿಗೆ ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಇದೆ. ಆದರೂ ಸರ್ಕಾರಗಳು ಮಾತ್ರ ಕಾರ್ಪೋರೇಟ್‌ಗಳಿಗೆ ಭೂಮಿ ಕೊಡಲು ಮುಂದಾಗಿವೆ. ಕಳೆದ ಐದು ವರ್ಷಗಳಿಂದ ಜನರ ವಿರೋಧಿಯಾಗಿರುವ ಕಾನೂನು-ಕಾಯ್ದೆಗಳನ್ನೇ ತರಲಾಗುತ್ತಿದೆ. ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಿಗರಿಗೆ ಅನುಕೂಲವಾಗುವಂತೆ ಬದಲಾಯಿಸಲಾಗುತ್ತಿದೆ. ಸ್ವಾತಂತ್ಯ್ರಾ ನಂತರದಲ್ಲಿ ಯಾವ ಸರ್ಕಾರವೂ ಈ ರೀತಿ ಆಡಳಿತ ಕೊಟ್ಟಿರಲಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಮುಂದಿನ ಐದು ವರ್ಷದಲ್ಲಿ ಅವರು ನಮ್ಮ ಎಲ್ಲಾ ಬಡ ಜನರ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಜನರು ಪ್ರಶ್ನೆ ಎತ್ತಬೇಕಿದೆ. ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ಪ್ರಜಾಪ್ರಭುತ್ವ ಎಂದರೆ ಸೀಟಿನಲ್ಲಿ ಕೂರಿಸುವುದಲ್ಲ. ಯಾವ ಸರ್ಕಾರ ಬಂದರೂ ಜನ ವಿರೋದಿ ಕೆಲಸಗಳನ್ನು ನಾವು ಪ್ರಶ್ನೆ ಮಾಡಬೇಕು ಅದೇ ಪ್ರಜಾಪ್ರಭುತ್ವ. ನಾವು ಪ್ರಶ್ನೆ ಮಾಡದೆ ಕುಳಿತರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಹೇಳಿದರು.

ಕೊರೊನಾವನ್ನು ತೋರಿಸಿ ಬಡವರ ಬದುಕು ಕಸಿದುಕೊಳ್ಳಲಾಗುತ್ತಿದ್ದು, ಅದನ್ನು ವಿರೋಧಿಸಬೇಕು. ಈ ಕಾಯ್ದೆ-ಕಾನೂನುಗಳ ಕುರಿತು ಯಾವ ಮಾಧ್ಯಮಗಳೂ ಚರ್ಚೆ ನಡೆಸಿಲ್ಲ, ನಡೆಸುವುದೂ ಇಲ್ಲ. ಆದ್ದರಿಂದ ಈ ಹೋರಾಟದಲ್ಲಿ ಭಾಗಿಯಾಗಿರುವ ಜನರೇ ಇದರ ರಾಯಭಾರಿಗಳಾಗಬೇಕು. ಈ ಕಾನೂನುಗಳ ವಿರುದ್ಧ ಚರ್ಚೆ ಹುಟ್ಟು ಹಾಕಬೇಕು. ನಮ್ಮ ಪ್ರಶ್ನೆಗಳು ವಿಧಾನಸೌಧದಲ್ಲಿ ಚರ್ಚೆಯಾಗುವಂತೆ ಮಾಡಬೇಕು ಎಂದು ಹೇಳಿದರು.

ಫೋಟೋ ಕೃಪೆ: ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ/Facebook

ಜಾಥಾದ ಉದ್ಘಾಟನೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್, ಕುಮಾರ್ ಸಮತಳ, ವರದರಾಜ್, ಸವಿತ ಕೊಡಗು, ಮನೋಜ್, ರಾಜಶೇಖರ್ ಅಂಗಡಿ ಸೇರಿದಂತೆ ಹಲವಾರು ರೈತರು, ದಲಿತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...