Homeಮುಖಪುಟಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಸಲಿಂಗಿಗಳ ನಡುವಿನ ಸಂಸ್ಕಾರಯುತವಲ್ಲದ ವಿವಾಹವನ್ನು ನಮ್ಮ ಕಾನೂನುಗಳು ಹಾಗೂ ನಮ್ಮ ಸಮಾಜ ಒಪ್ಪುವುದಿಲ್ಲ

- Advertisement -
- Advertisement -

ನಮ್ಮ ಕಾನೂನುಗಳು, ಕಾನೂನು ವ್ಯವಸ್ಥೆ, ಸಮಾಜ ಮತ್ತು ಮೌಲ್ಯಗಳು ಸಲಿಂಗ ವಿವಾಹಗಳನ್ನು ಒಪ್ಪಿಕೊಳ್ಳುವುದಿಲ್ಲ, ಹಾಗಾಗಿ ಅವುಗಳನ್ನು ಅನುಮತಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ದಿಲ್ಲಿ ಹೈಕೋಟ್‌ಗೆ ತಿಳಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ಎನ್.ಪಟೇಲ್ ನೇತೃತ್ವದ ಪೀಠದ ಮುಂದೆ, ಹಿಂದು ವಿವಾಹ ಕಾಯ್ದೆ ಮತ್ತು ವಿಶೇಷ ವಿವಾಹ ಕಾಯ್ದೆಗಳಡಿ ಸಲಿಂಗ ವಿವಾಹಗಳಿಗೆ ಮಾನ್ಯತೆ ನೀಡಬೇಕು ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣಾ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕೋರಿಕೆಯನ್ನು ವಿರೋಧಿಸಿದ ತುಷಾರ್‌ ಮೆಹ್ತಾ, ಸಲಿಂಗಿಗಳ ನಡುವಿನ ಸಂಸ್ಕಾರಯುತವಲ್ಲದ ವಿವಾಹವನ್ನು ನಮ್ಮ ಕಾನೂನುಗಳು ಹಾಗೂ ನಮ್ಮ ಸಮಾಜ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಸಲಿಂಗ ವಿವಾಹಗಳಿಗೆ ಮಾನ್ಯತೆ ಅಥವಾ ನೋಂದಣಿಗೆ ಅನುಮತಿ ಕೋರಿರುವ ಅರ್ಜಿಯು ಎರಡು ಕಾರಣಗಳಿಂದ ಸ್ವೀಕಾರಾರ್ಹವಲ್ಲ. ಶಾಸನವನ್ನು ರೂಪಿಸುವಂತೆ ಅರ್ಜಿಯು ನ್ಯಾಯಾಲಯಕ್ಕೆ ಕೋರಿಕೊಂಡಿರುವುದು ಮೊದಲ ಕಾರಣವಾಗಿದ್ದರೆ, ಕೋರಿಕೆಯನ್ನು ಈಡೇರಿಸುವುದು ವಿವಿಧ ಕಾನೂನುಗಳಿಗೆ ವಿರುದ್ಧವಾಗುತ್ತದೆ ಎನ್ನುವುದು ಎರಡನೆಯ ಕಾರಣವಾಗಿದೆ ಎಂದು ತುಷಾರ್‌ ಮೆಹ್ತಾ ತಿಳಿಸಿದ್ದಾರೆ.

ಹಿಂದು ವಿವಾಹ ಕಾಯ್ದೆಯಡಿ ಗಂಡ ಮತ್ತು ಹೆಂಡತಿಯ ಪಾತ್ರವನ್ನು ನಿರೂಪಿಸಲಾಗಿದೆ. ಈ ವಿವಾಹದಲ್ಲಿ ಯಾರು ಗಂಡ, ಯಾರು ಹೆಂಡತಿ ಎನ್ನುವುದನ್ನು ನಿರ್ಧರಿಸುವುದು ಹೇಗೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಸಲಿಂಗ ವಿವಾಹ ಬಯಸುವವರು ವಿದ್ಯಾವಂತರಾಗಿದ್ದಾರೆ ಮತ್ತು ನೇರವಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಹೀಗೀರುವಾಗ ನಾವೇಕೆ ಈ ಪಿಐಎಲ್‌ನ್ನು ವಿಚಾರಣೆಗೆ ಅಂಗೀಕರಿಸಬೇಕು ಎಂದು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಅವರು ಸಮಾಜದ ಪ್ರತೀಕಾರಕ್ಕೆ ಹೆದರಿದ್ದು, ಹೀಗಾಗಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಉತ್ತರಿಸಿದರು.

ಸಲಿಂಗ ವಿವಾಹವನ್ನು ನೋಂದಣಿ ಮಾಡಿಕೊಳ್ಳಲು ಅನುಮತಿ ಸಿಗದ ವ್ಯಕ್ತಿಗಳ ವಿವರಗಳನ್ನು ತನಗೆ ಒದಗಿಸುವಂತೆ ಅವರಿಗೆ ಸೂಚಿಸಿದ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್‌ 21ಕ್ಕೆ ಮುಂದೂಡಿದೆ.


ಇದನ್ನೂ ಓದಿ: ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...