Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...