Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...