Homeಕರ್ನಾಟಕದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

- Advertisement -
- Advertisement -

ಇಂದು ನಡೆಯಬೇಕಿದ್ದ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಪ್ಯಾನಲ್‌ನ ವಿಚಾರಣೆಗೆ ಫೇಸ್‌ಬುಕ್ ಗೈರು ಹಾಜರಾಗಿದೆ. ಇದು ಫೇಸ್‌ಬುಕ್‌ಗೆ ಅಂತಿಮ ಎಚ್ಚರಿಕೆಯಾಗಿದ್ದು ಮುಂದೆಯು ಗೈರು ಹಾಜರಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಮಿತಿ ತಿಳಿಸಿದೆ.

ಈ ವಿಷಯವು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಈಗಾಗಲೇ ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದೇವೆ. ಹಾಗಾಗಿ ದೆಹಲಿ ವಿಧಾನಸಭಾ ಪ್ಯಾನಲ್ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಮಿತಿಯ ಅಧ್ಯಕ್ಷ ರಾಘವ್ ಛಡ್ಡಾ “ಫೇಸ್‌ಬುಕ್ ತಾನು ಪಾರ್ಲಿಮೆಂಟರಿ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಿರುವುದಾಗಿ ತಿಳಿಸಿದೆ. ಆದರೆ ದೆಹಲಿ ವಿಧಾನಸಭೆಯು ಅದರಲ್ಲಿ ಮಧ್ಯಪ್ರವೇಶಿಸಲಾಗುವುದಿಲ್ಲ. ಹಾಗಾಗಿ ಅದು ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗುವುದು ಅನಿವಾರ್ಯ” ಎಂದಿದ್ದಾರೆ.

ಫೇಸ್‌ಬುಕ್‌ನ ಅಧಿಕಾರಿಗಳ ಈ ನಡೆಯನ್ನು ಸಮಿತಿಯ ಸದಸ್ಯರು ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ಮಾಡುವ ಅವಮಾನ ಮತ್ತು ನಿಂದನೆಯೆಂದು ಕರೆದಿದ್ದಾರೆ. ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ವಿಚಾರಣೆ ನಡೆಸುವುದು ಸಮಿತಿಯ ಹಕ್ಕಾಗಿದೆ ಎಂದಿದ್ದಾರೆ.

ಗಲಭೆಯ ಸಂದರ್ಭದಲ್ಲಿ ದೆಹಲಿ ಹೊತ್ತಿ ಉರಿಯುತ್ತಿದ್ದಾಗ, ಫೇಸ್‌ಬುಕ್‌ ತನ್ನ ಸಾಮೂದಾಹಿಕ ನಿಯಮಗಳನ್ನು ಉಲ್ಲಂಘಿಸುವವರನ್ನು ನಿಯಂತ್ರಿಸುವಲ್ಲಿ ಪಕ್ಷಪಾತವೆಸಗಿತ್ತು ಎಂಬ ಆರೋಪ ಎದುರಿಸುತ್ತಿದೆ. ಈ ಕುರಿತು ಫೇಸ್‌ಬುಕ್‌ನ ಅಜಿತ್ ಮೋಹನ್ ಸಮಿತಿಯ ಮುಂದೆ ಹಾಜರಾಗಿ ಉತ್ತರಿಸಬೇಕು ಎಂದು ರಾಘವ್ ಛಡ್ಡಾ ಅಂತಿಮ ಎಚ್ಚರಿಕೆ ನೀಡಿದ್ದಾರೆ.

ಇದು ದೆಹಲಿಗೆ ಸಂಬಂಧಿಸಿದ ವಿಷಯದ ವಿಚಾರಣೆಯಾಗಿದೆ. ಇದನ್ನು ದೆಹಲಿಗೆ ಸಂಬಂಧಿಸಿದ್ದಲ್ಲ ಎಂದು ಫೇಸ್‌ಬುಕ್ ಹೇಗೆ ಹೇಳುತ್ತದೆ? ವಿಚಾರಣೆಗೆ ಹಾಜರಾಗುವುದರ ನಿರಾಕರಣೆಯು ದೆಹಲಿ ಗಲಭೆಯಲ್ಲಿ ನಿಮ್ಮ ಪಾತ್ರವನ್ನು ಅಂಗೀಕರಿಸುತ್ತದೆ ಎಂದು ಸಮಿತಿಯ ಮತ್ತೊಬ್ಬ ಸದಸ್ಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...