Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ

- Advertisement -
- Advertisement -

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಪುನರಾರಂಭಿಸಲು ಅನುಮತಿ ನೀಡಿ, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಈ ಹಿಂದೆ ನೀಡಿದ್ದ ತಡೆಯ ಆದೇಶವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ ಮಂಗಳವಾರ ಹಿಂಪಡೆಡಿದ್ದಾರೆ.

ಆದರೆ ಈ ಅನುಮತಿಗೂ DCGI ಹಲವು ಷರತ್ತುಗಳನ್ನು ವಿಧಿಸಿದ್ದು, ಸ್ಕ್ರೀನಿಂಗ್ ಸಮಯದಲ್ಲಿ ಸ್ವಯಂಸೇವಕರ ಹೆಚ್ಚಿನ ಕಾಳಜಿ ವಹಿಸುವುದು, ಸ್ವಯಂಸೇವಕರೊಂದಿಗೆ ಒಪ್ಪಿಗೆ ಪ್ರಮಾಣ ಪತ್ರದಲ್ಲಿ ಪ್ರಯೋಗದ ಕುರಿತು ಹೆಚ್ಚಿನ ಮಾಹಿತಿ ನೀಡುವುದು, ಪ್ರತಿಕೂಲ ಘಟನೆಗಳಿಗೆ ನಿಕಟ ಮೇಲ್ವಿಚಾರಣೆ, ಸ್ವಯಂ ಸೇವಕರ ಫಾಲೋಅಪ್ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಮುಂದಿನ ಕ್ರಮ ಅನುಸರಿಸಬೇಕು ಎಂಬಿತ್ಯಾದಿ ಅಂಶಗಳು ಸೇರಿದಂತೆ ಹಲವು ಷರತ್ತುಗಳನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ(SII) ವಿಧಿಸಲಾಗಿದೆ.

ಪ್ರತಿಕೂಲ ಘಟನೆಗಳ ನಿರ್ವಹಣೆಗೆ ಪ್ರೋಟೋಕಾಲ್‌ಗೆ ಅನುಗುಣವಾಗಿ ಬಳಸುವ ಔಷಧಿಗಳ ಬಗ್ಗೆ DCGI ಕಚೇರಿಗೆ ವಿವರಗಳನ್ನು ಸಲ್ಲಿಸಲು SIIಗೆ ಸೂಚಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 11 ರಂದು, ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತನ್ನ ಆಕ್ಸ್ ಫರ್ಡ್ ಲಸಿಕೆಯ 2 ಮತ್ತು ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಸೇವಕರ ನೇಮಕಾತಿಗೆ ಮುಂದಾಗಿತ್ತು. ಆದರೆ ಆಸ್ಟ್ರಾ ಜೆನಿಕಾ ಘಟನೆ ಬಳಿಕ ಲಸಿಕೆ ಪ್ರಯೋಗ ಸಂಬಂಧ ಹೊಸ ನೇಮಕಾತಿ (ಸ್ವಯಂ ಸೇವಕರು) ಮಾಡಿಕೊಳ್ಳದಂತೆ ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡಿಸಿಜಿಐ ಸೂಚನೆ ನೀಡಿತ್ತು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಶನಿವಾರ, ಪ್ರಯೋಗಗಳು ಸುರಕ್ಷಿತವೆಂದು ಔಷಧಿ ಆರೋಗ್ಯ ನಿಯಂತ್ರಣ ಪ್ರಾಧಿಕಾರದ (MHRA) ದೃಢಪಡಿಸಿದ ನಂತರ, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು, ‘ತಮ್ಮ ಕೊರೊನಾ ವೈರಸ್ ಲಸಿಕೆಗಾಗಿ ಕ್ಲಿನಿಕಲ್ ಪ್ರಯೋಗಗಳು ಯುಕೆಯಲ್ಲಿ ಪುನರಾರಂಭಗೊಂಡಿವೆ’ ಎಂದು ಹೇಳಿದೆ.

ಕೊರೊನಾಗಾಗಿ ಲಸಿಕೆ ಅಭ್ಯರ್ಥಿಯನ್ನು ತಯಾರಿಸಲು ಅಸ್ಟ್ರಾಜೆನೆಕಾ ಜೊತೆ ಪಾಲುದಾರಿಕೆ ಹೊಂದಿರುವ SII, ಯುಕೆ ಮತ್ತು ಭಾರತ ಮತ್ತು ಡೇಟಾ ಮತ್ತು ಸುರಕ್ಷತಾ ಮಾನಿಟರಿಂಗ್ ಬೋರ್ಡ್ (DSMB), ಮತ್ತು ಭಾರತದ DSMB ಶಿಫಾರಸುಗಳನ್ನು ಮಂಗಳವಾರ ಸಲ್ಲಿಸಿ, ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಾತಿಯನ್ನು ಮರುಪ್ರಾರಂಭಿಸಲು ಅನುಮತಿ ಕೋರಿತ್ತು.

ಮಂಗಳವಾರ DCGI ಹೊರಡಿಸಿದ ಆದೇಶದ ಪ್ರಕಾರ, ಯುಕೆ ಯ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ತನಿಖಾಧಿಕಾರಿಗಳು ತಮ್ಮ ಕ್ಲಿನಿಕಲ್ ಪ್ರಯೋಗಗಳಲ್ಲಿ ಎಲ್ಲಾ ರೋಗನಿರೋಧಕವನ್ನು ಪುನಃ ಪ್ರಾರಂಭಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದೆ.

ಭಾರತದ DSMB, ಕೆಲವು ಷರತ್ತುಗಳಿಗೆ ಒಳಪಟ್ಟು ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸಲು ಮತ್ತು ಉಳಿದ ಭಾಗವಹಿಸುವವರನ್ನು ಕ್ಲಿನಿಕಲ್ ಪ್ರಯೋಗದಲ್ಲಿ ದಾಖಲಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಪುಣೆ ಮೂಲದ ಸಂಸ್ಥೆಯು ಮೊದಲ ವ್ಯಾಕ್ಸಿನೇಷನ್ ನಂತರದ ಏಳು ದಿನಗಳ ಸುರಕ್ಷತೆಯ ಅನುಸರಣೆಯ ಸಾರಾಂಶವನ್ನು ಸಲ್ಲಿಸಿದೆ. ವರದಿಯ ದಿನಾಂಕದವರೆಗೆ ಯಾವುದೇ ಘಟಕಗಳಿಂದ ಯಾವುದೇ ಗಂಭೀರ ಪ್ರತಿಕೂಲ ಘಟನೆಗಳು ಸಂಭವಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಪರವಾನಗಿ ಪ್ರಾಧಿಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಡಾ. ವಿ.ಜಿ.ಸೋಮಾನಿ, “ಭಾರತ ಮತ್ತು ಯುಕೆ ಯಲ್ಲಿ DSMBಯ ಶಿಫಾರಸುಗಳನ್ನು ಪರಿಶೀಲಿಸಿದ ನಂತರ, ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019ರ ನಿಯಮ 30 ರ ಅಡಿಯಲ್ಲಿ ಹೊರಡಿಸಲಾದ ಸೆಪ್ಟೆಂಬರ್ 11 ರ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಅನುಮೋದಿತ ಪ್ರೋಟೋಕಾಲ್ ಮತ್ತು ಹೊಸ ಔಷಧಗಳು ಮತ್ತು ಕ್ಲಿನಿಕಲ್ ಟ್ರಯಲ್ ರೂಲ್ಸ್, 2019 ರ ಅಡಿಯಲ್ಲಿ ತಿಳಿಸಲಾದ ಷರತ್ತುಗಳಿಗೆ ಅನುಗುಣವಾಗಿ ಭಾರತದ DSMB ಶಿಫಾರಸು ಮಾಡಿದಂತೆ, ನೀವು ಕ್ಲಿನಿಕಲ್ ಪ್ರಯೋಗವನ್ನು ಪುನಃ ಪ್ರಾರಂಭಿಸಬಹುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...