Homeಕರೋನಾ ತಲ್ಲಣಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಅಧಿಕೃತವಾಗಿ, ಬೆಂಗಳೂರು ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳ ಸಂಖ್ಯೆ 263.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಿನ್ನೆ ರಾಜಧಾನಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ. ಆದರೂ ಕೂಡ ಸರ್ಕಾರ ಐಸಿಯು ಮತ್ತು ಐಸಿಯು ವೆಂಟಿಲೇಟರ್‌ಗಳ ಕೊರತೆಯನ್ನು ನೀಗಿಸಲಾಗಿಲ್ಲ.

ಬೆಡ್‌ಗಳ ಕೊರತೆ ಶುರುವಾಗಿ ಐದು ದಿನಗಳಾದರೂ ಈವರೆಗೆ ಬಿಬಿಎಂಪಿ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಡ್ ಇಲ್ಲದ ಕಾರಣ 46 ವರ್ಷದ ಸೋಂಕಿತ ವ್ಯಕ್ತಿಬಲಿಯಾಗಿದ್ದಾರೆ. ರೋಗಿಯನ್ನು ಬೊಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಗೆ ಸರ್ಕಾರಿ ಕೋಟ ಅಡಿಯಲ್ಲಿ ಕಳುಹಿಸಲಾಗಿತ್ತು.

ಇದನ್ನೂ ಓದಿ: ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಆದರೆ, ರಾತ್ರಿ ಅವರ ಪರಿಸ್ಥಿತಿ ಹದಗೆಟ್ಟರೂ ಆಸ್ಪತ್ರೆ ಸಿಬ್ಬಂದಿ ಭಯದಿಂದ ರೋಗಿಯನ್ನು ದೂರವೇ ಇಟ್ಟಿದ್ದಾರೆ. ರೋಗಿಯ ಆಕ್ಸಿಜನ್ ಲೆವೆಲ್ 40% ಗೆ ಇದ್ದರೂ ಆಸ್ಪತ್ರೆ ಬೆಡ್ ವ್ಯವಸ್ಥೆ ಮಾಡಲಿಲ್ಲ. ಬದಲಾಗಿ ಆಪೊಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿದರು. ಆದರೆ ಮಾರ್ಗ ಮಧ್ಯೆಯೇ ರೋಗಿ ಸಾವನ್ನಪ್ಪಿದ್ದಾರೆ ಎಂದು ಮರ್ಸಿ ಏಂಜಲ್ಸ್ ಎಂಬ ಎನ್‌ಜಿಒದ ತೌಸೀಫ್ ಅಹ್ಮದ್ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳನ್ನು ಸರಿಯಾಗಿ ಅಂದಾಜು ಮಾಡಿಲ್ಲ. ಹಾಗಾಗಿ ನಾವು ಬೆಡ್‌ಗಳ ಸಮಸ್ಯೆ ಎದುರಿಸುತ್ತಿದ್ದೇವೆ. ಅವರಿಗೆ ಒದಗಿಸಿರುವ ಅಂಕಿ ಅಂಶಗಳು ಬೋಗಸ್ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್ ಹೇಳಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ನಗರದ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ 144 ಐಸಿಯು ವೆಂಟಿಲೇಟರ್ ಹಾಸಿಗೆಗಳಿವೆ, ಜೊತೆಗೆ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯಕೀಯ ಕಾಲೇಜುಗಳಲ್ಲಿ 418 ಹಾಸಿಗೆಗಳಿವೆ. ಆದರೆ, ಕೊರೊನಾ ರೋಗಿಗಳಿಗೆ ಮಾತ್ರ ಹಾಸಿಗೆಗಳು ಸಿಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ.

ಆದರೆ, ಅಧಿಕೃತವಾಗಿ, ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳು 263 ಮಾತ್ರ. ಇದು 46.7% ರಷ್ಟು. ಅಧಿಕಾರಿಗಳು ಮತ್ತು ಸ್ವಯಂ ಸೇವಕರು‌ ಹೇಳುವಂತೆ ಖಾಸಗಿ ಕೋಟಾ ರೋಗಿಗಳು ಅನೇಕ ಹಾಸಿಗೆಗಳನ್ನು ಬಳಸುತ್ತಿದ್ದಾರೆ ಎನ್ನುತ್ತಾರೆ.

ಐಸಿಯು ಬೆಡ್ ಕೊರತೆ ಬಗ್ಗೆ ಕುರಿತು ಮಾತನಾಡಿದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ಆಸ್ಪತ್ರೆಗೆ ಕಳುಹಿಸಬೇಕಿದ್ದ ಅನೇಕ ಕೊರೊನಾ ಸೋಂಕಿತರನ್ನು ಮನೆಗಳಿಗೆ ಕಳುಹಿಸಲಾಯಿತು. ಹೀಗಾಗಿ ಅನೇಕ ರೋಗಿಗಳು ಗಂಭೀರ ಪರಿಸ್ಥಿತಿಯಲ್ಲಿದ್ದು, ಐಸಿಯು ಬೆಡ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

ಜೊತೆಗೆ ವೈದ್ಯಕೀಯ ಮೂಲಸೌಕರ್ಯಗಳು ದುರ್ಬಲವಾಗಿರುವ ಸುತ್ತಮುತ್ತಲಿನ ಜಿಲ್ಲೆಗಳ ಜನರು ಸಹ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದು ಕೂಡ ಬೆಡ್‌ಗಳ ಕೊರತೆಗೆ ಕಾರಣವಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...