Homeಕರೋನಾ ತಲ್ಲಣಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಅಧಿಕೃತವಾಗಿ, ಬೆಂಗಳೂರು ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳ ಸಂಖ್ಯೆ 263.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಿನ್ನೆ ರಾಜಧಾನಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ. ಆದರೂ ಕೂಡ ಸರ್ಕಾರ ಐಸಿಯು ಮತ್ತು ಐಸಿಯು ವೆಂಟಿಲೇಟರ್‌ಗಳ ಕೊರತೆಯನ್ನು ನೀಗಿಸಲಾಗಿಲ್ಲ.

ಬೆಡ್‌ಗಳ ಕೊರತೆ ಶುರುವಾಗಿ ಐದು ದಿನಗಳಾದರೂ ಈವರೆಗೆ ಬಿಬಿಎಂಪಿ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಡ್ ಇಲ್ಲದ ಕಾರಣ 46 ವರ್ಷದ ಸೋಂಕಿತ ವ್ಯಕ್ತಿಬಲಿಯಾಗಿದ್ದಾರೆ. ರೋಗಿಯನ್ನು ಬೊಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಗೆ ಸರ್ಕಾರಿ ಕೋಟ ಅಡಿಯಲ್ಲಿ ಕಳುಹಿಸಲಾಗಿತ್ತು.

ಇದನ್ನೂ ಓದಿ: ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಆದರೆ, ರಾತ್ರಿ ಅವರ ಪರಿಸ್ಥಿತಿ ಹದಗೆಟ್ಟರೂ ಆಸ್ಪತ್ರೆ ಸಿಬ್ಬಂದಿ ಭಯದಿಂದ ರೋಗಿಯನ್ನು ದೂರವೇ ಇಟ್ಟಿದ್ದಾರೆ. ರೋಗಿಯ ಆಕ್ಸಿಜನ್ ಲೆವೆಲ್ 40% ಗೆ ಇದ್ದರೂ ಆಸ್ಪತ್ರೆ ಬೆಡ್ ವ್ಯವಸ್ಥೆ ಮಾಡಲಿಲ್ಲ. ಬದಲಾಗಿ ಆಪೊಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿದರು. ಆದರೆ ಮಾರ್ಗ ಮಧ್ಯೆಯೇ ರೋಗಿ ಸಾವನ್ನಪ್ಪಿದ್ದಾರೆ ಎಂದು ಮರ್ಸಿ ಏಂಜಲ್ಸ್ ಎಂಬ ಎನ್‌ಜಿಒದ ತೌಸೀಫ್ ಅಹ್ಮದ್ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳನ್ನು ಸರಿಯಾಗಿ ಅಂದಾಜು ಮಾಡಿಲ್ಲ. ಹಾಗಾಗಿ ನಾವು ಬೆಡ್‌ಗಳ ಸಮಸ್ಯೆ ಎದುರಿಸುತ್ತಿದ್ದೇವೆ. ಅವರಿಗೆ ಒದಗಿಸಿರುವ ಅಂಕಿ ಅಂಶಗಳು ಬೋಗಸ್ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್ ಹೇಳಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ನಗರದ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ 144 ಐಸಿಯು ವೆಂಟಿಲೇಟರ್ ಹಾಸಿಗೆಗಳಿವೆ, ಜೊತೆಗೆ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯಕೀಯ ಕಾಲೇಜುಗಳಲ್ಲಿ 418 ಹಾಸಿಗೆಗಳಿವೆ. ಆದರೆ, ಕೊರೊನಾ ರೋಗಿಗಳಿಗೆ ಮಾತ್ರ ಹಾಸಿಗೆಗಳು ಸಿಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ.

ಆದರೆ, ಅಧಿಕೃತವಾಗಿ, ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳು 263 ಮಾತ್ರ. ಇದು 46.7% ರಷ್ಟು. ಅಧಿಕಾರಿಗಳು ಮತ್ತು ಸ್ವಯಂ ಸೇವಕರು‌ ಹೇಳುವಂತೆ ಖಾಸಗಿ ಕೋಟಾ ರೋಗಿಗಳು ಅನೇಕ ಹಾಸಿಗೆಗಳನ್ನು ಬಳಸುತ್ತಿದ್ದಾರೆ ಎನ್ನುತ್ತಾರೆ.

ಐಸಿಯು ಬೆಡ್ ಕೊರತೆ ಬಗ್ಗೆ ಕುರಿತು ಮಾತನಾಡಿದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ಆಸ್ಪತ್ರೆಗೆ ಕಳುಹಿಸಬೇಕಿದ್ದ ಅನೇಕ ಕೊರೊನಾ ಸೋಂಕಿತರನ್ನು ಮನೆಗಳಿಗೆ ಕಳುಹಿಸಲಾಯಿತು. ಹೀಗಾಗಿ ಅನೇಕ ರೋಗಿಗಳು ಗಂಭೀರ ಪರಿಸ್ಥಿತಿಯಲ್ಲಿದ್ದು, ಐಸಿಯು ಬೆಡ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

ಜೊತೆಗೆ ವೈದ್ಯಕೀಯ ಮೂಲಸೌಕರ್ಯಗಳು ದುರ್ಬಲವಾಗಿರುವ ಸುತ್ತಮುತ್ತಲಿನ ಜಿಲ್ಲೆಗಳ ಜನರು ಸಹ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದು ಕೂಡ ಬೆಡ್‌ಗಳ ಕೊರತೆಗೆ ಕಾರಣವಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...