Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...