HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...