Homeಮುಖಪುಟಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಕಲ್ಯಾಣ್ ಸಿಂಗ್, ಎಂ.ಎಂ.ಜೋಶಿ, ಉಮಾ ಭಾರತಿ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿದೆ

- Advertisement -
- Advertisement -

28 ವರ್ಷಗಳ ಹಳೆಯ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 30 ರಂದು ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಿ, ತೀರ್ಪು ನೀಡಲಿದ್ದಾರೆ.

ತೀರ್ಪಿನ ವಿಚಾರಣೆಗಾಗಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ:  ಸೆಪ್ಟೆಂಬರ್ 30 ಕ್ಕೆ ಅಂತಿಮ ತೀರ್ಪು

 

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು.ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ‌ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮ: ಉಮಾ ಭಾರತಿಗೆ ಆಹ್ವಾನ – ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...