Homeಮುಖಪುಟಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಗೌರವ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದನ್ನು ಕೆಳಗಿಳಿಸಲು ಸಾಧ್ಯವಿಲ್ಲ- ಹೇಮಾ ಮಾಲಿನಿ

- Advertisement -
- Advertisement -

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ಉದ್ಯಮದ ಮೇಲೆ ಮಾಡುತ್ತಿರುವ ದಾಳಿ ಮತ್ತು ಆರೋಪಗಳು ನಿಜವಾಗಿಯೂ ನೋವನ್ನುಂಟುಮಾಡುತ್ತಿವೆ ಎಂದು ಬಿಜೆಪಿ ಸಂಸದೆ ಮತ್ತು ಹಿರಿಯ ಬಾಲಿವುಡ್ ನಟಿ ಹೇಮಾ ಮಾಲಿನಿ ವಿಷಾದ ವ್ಯಕ್ತಪಡಿಸಿದರು. “ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದರ ಗೌರವವನ್ನು ಕೆಳಗಿಳಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಮತ್ತು ಮಾದಕವಸ್ತು ಸೇವನೆಗೆ ಸಂಬಂಧಿಸಿದಂತೆ ಬಾಲಿವುಡ್ ಚಲನಚಿತ್ರೋದ್ಯಮವನ್ನು ಕೆಣಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಸಂಸತ್ತಿನಲ್ಲಿ ಹೇಳಿದ ಒಂದು ದಿನದ ನಂತರ ಹೇಮಾ ಮಾಲಿನಿ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಈ ಮಾತನ್ನು ಹೇಳಿದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಹೇಮಾ ಮಾಲಿನಿ, ರಾಜಕೀಯದಲ್ಲಿ ಜಯ ಬಚ್ಚನ್ ಅವರ ಪ್ರತಿಸ್ಪರ್ಧಿಯಾಗಿದ್ದರೂ, ಅವರ ಹೇಳಿಕೆಯನ್ನು ಬೆಂಬಲಿಸಿ, “ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ” ಎಂದು ಹೇಳಿದರು.

ಮುಂದುವರರಿದು, “ಅನೇಕ ಕಲಾವಿದರು ಉದ್ಯಮವನ್ನು ಕಟ್ಟಲು ತುಂಬಾ ಶ್ರಮಿಸಿದ್ದಾರೆ. ಎಷ್ಟೋ ಕಲಾವಿದರನ್ನು ದೇವರಂತೆ ಆರಾಧಿಸುತ್ತಿದ್ದರು. ರಾಜ್ ಕಪೂರ್, ಧರ್ಮೇಂದ್ರ (ಹೇಮಾ ಮಾಲಿನಿ ಅವರ ಪತಿ), ಅಮಿತ್ ಜೀ ಮುಂತಾದವರುಗಳಿಂದ ಉದ್ಯಮವನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ದಿದ್ದರು. ಆದರೆ ಈ ಸಂದರ್ಭದಲ್ಲಿ ಹೀಗೆ ಉದ್ಯಮವನ್ನು ಅಪಹಾಸ್ಯ ಮಾಡುವುದನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ಒಂದೆರಡು ಪ್ರಕರಣಗಳನ್ನು ಉಲ್ಲೇಖಿಸಿ ಇಡೀ ಉದ್ಯಮವನ್ನು ದೂಷಿಸುವುದು ಸರಿಯಲ್ಲ. ಇದನ್ನು ಒಪ್ಪಲೂ ಸಾಧ್ಯವಿಲ್ಲ” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ನಟಿ ಮತ್ತು ಸಂಸದೆ ಜಯಾ ಬಚ್ಚನ್ ಅವರನ್ನು ಬೆಂಬಲಿಸಿ ಅಥವಾ ಅವರ ಪರ ನಿಂತು ಹೇಳಿಕೆ ನೀಡುತ್ತಿರುವವರ ಸಾಲಿನಲ್ಲಿ ಈಗ ಹೇಮಾ ಮಾಲಿನಿ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...