Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...