Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...