Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...