Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...