Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

- Advertisement -
- Advertisement -

ನಿವೃತ್ತ ಮುಖ್ಯ ಶಿಕ್ಷಕರು, ಸಮಾನ ಶಿಕ್ಷಣ, ಸುಸ್ಥಿರ ಪರಿಸರಕ್ಕಾಗಿ ಕಾರ್ಯಕರ್ತ, ಹೋರಾಟಗಾರರಾದ ರಾಮಕೃಷ್ಣಪ್ಪನವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ನಿರಾಕರಿಸಿದ್ದಾರೆ…ಯಾಕೆ? ಇಲ್ಲಿ ಓದಿ.

ರಾಜ್ಯೋತ್ಸವ ಪ್ರಶಸ್ತಿ ಬೇಡ……!!?

ನಾನು ಈ ದೇಶದ ನಾಗರೀಕ. ಜನ ವಿಜ್ಞಾನ ಚಳುವಳಿಯ ಸಾಮಾನ್ಯ ಕಾರ್ಯಕರ್ತ. ನನಗೆ 2019 – 2020 ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ Biodata ಕಳುಹಿಸುವಂತೆ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ online ಪತ್ರ ಬಂದಿದೆ. ಆತ್ಮೀಯ ಗೆಳೆಯ ಕೆಂಕೆರೆ ಮಲ್ಲಿಕಾರ್ಜುನ್ ಮತ್ತು ಸಂಘಟನೆಯ ಸಂಗಾತಿ ಎನ್ ಇಂದಿರಮ್ಮ ವಿವರ ಕಳುಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಶಿಷ್ಯ ಮತ್ತು ಶಿರಡಿ ಸಾಯಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿಠಲ್ ಭೀಮಯ್ಯ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರನ್ನು ಶಿಫಾರಸು ಮಾಡುವಂತೆ ಫೇಸ್‌ಬುಕ್‌ನಲ್ಲಿ ಕಾನೂನು ಸಚಿವವರಿಗೆ ಮನವಿ ಮಾಡಿದ್ದಾರೆ. ನನ್ನ ಬಗ್ಗೆ ಅಭಿಮಾನವಿಟ್ಟಿರುವ ಆತ್ಮೀಯ ಗೆಳೆಯರು ಮತ್ತು ಅಧಿಕಾರಿಗಳಿಗೆ ನಾನು ಆಬಾರಿ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ರಾಜ್ಯೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಬೇಕೇ? ಈಗಿನ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ನಾನೇ ಪ್ರಶ್ನಿಸಿಕೊಂಡೆ?

  1. ಕೃಷಿ ಮತ್ತು ರೈತ ಸಮುದಾಯಕ್ಕೆ ಮಾರಕವಾಗಬಹುದಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೊಂಡಿರುವಾಗ ರೈತನಾದ ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದರೆ ನನ್ನ ಒಡನಾಡಿ ಅನ್ನದಾತರಿಗೆ ಮಾಡುವ ವಂಚನೆಯಾಗುವುದಿಲ್ಲವೇ?
  2. ಶಿಕ್ಷಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅನಾಥವಾಗಿರುವ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪ್ರಯತ್ನಗಳಿಲ್ಲದೆ ಅವುಗಳನ್ನು ಮುಚ್ಚಲು ತಯಾರಿ ನಡೆದಿರುವ ಸಂದರ್ಭದಲ್ಲಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಕಾರ್ಯಕರ್ತನಾದ ನಾನು ಪ್ರಶಸ್ತಿ ಪಡೆಯುವುದು ಕುಗ್ರಾಮಗಳ ಮತ್ತು ಆರ್ಥಿಕ ಅಶಕ್ತರ ಮಕ್ಕಳ ಶಿಕ್ಷಣವನ್ನು ನಿರಾಕರಿಸಲು ಕೈಜೋಡಿಸಿದಂತಲ್ಲವೇ!!
  3. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮತ್ವ ಕುಸಿಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ಮಾಧ್ಯಮ ವಿಜೃಂಭಿಸುತ್ತಿದೆ. ಹಿಂದಿ ಹೇರಿಕೆಯಾಗುತ್ತಿದೆ. ಇಂತಹ ಕನ್ನಡ ಅನಾಥವಾಗಿರುವ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ “ಕನ್ನಡ” ರಾಜ್ಯೋತ್ಸವ ಪ್ರಶಸ್ತಿ ಕೇಳುವುದು ಕನ್ನಡಮ್ಮನಿಗೆ ಎಸಗುವ ದ್ರೋಹ ಅಲ್ಲವೇ?
  4. ಭೂಮಂಡಲದಲ್ಲಿ ಪಾರಿಸಾರಿಕ ಮಹತ್ವ ಪಡೆದಿರುವ ಪಶ್ಚಿಮ ಘಟ್ಟಗಳು ದಾಳಿಗೊಳಗಾಗಿವೆ, ನೈಸರ್ಗಿಕ ಸಂಪನ್ಮೂಲಗಳು(ನೀರು,ಖನಿಜ, ಕಲ್ಲು, ಮರಳು.. ) ಲೂಟಿಯಾಗುತ್ತಿರುವ ಸಮಯದಲ್ಲಿ, ಗಾಡ್ಗೀಳ್‌‌ರವರ ಜೊತೆ ಜೀವ ವೈವಿಧ್ಯ ದಾಖಲಾತಿ ಮಾಡಿರುವ ಮತ್ತು ಅರಣ್ಯ ಬೆಳೆಸುವ ಪ್ರಯತ್ನದಲ್ಲಿರುವ ನಾನು ಪ್ರಶಸ್ತಿಗೆ ಅಹವಾಲು ಸಲ್ಲಿಸುವುದು ಪರಿಸರ ವಿನಾಶಕ್ಕೆ ಕುಮ್ಮಕ್ಕು ಕೊಟ್ಟಂತಲ್ಲವೇ!?
  5. ಪರಿಹಾರ ಸಿಗದ ನೆರೆ ಸಂತ್ರಸ್ತರು ಮತ್ತು ಅರಣ್ಯವನ್ನೇ ನಂಬಿ ಸಾವಿರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮುಗ್ಧ ಅರಣ್ಯ ವಾಸಿಗಳು ಕಾಡಿನಿಂದ ಹೊರದಬ್ಬಲ್ಪಟ್ಟು ಬೆತ್ತಲೆಯಾಗಿ ಬೀದಿಯಲ್ಲಿ ಬಿದ್ದಿರುವಾಗ ಪ್ರಶಸ್ತಿ ಸಂದರ್ಭದಲ್ಲಿ ಹೊದ್ದಿಸುವ ಶಾಲು ನನ್ನನ್ನು ಅಣಕಿಸುವುದಿಲ್ಲವೇ??
  6. ಕೊರೊನಾ ತಂದಿತ್ತ ಸಂಕಷ್ಟದಿಂದ ಪಾರಾಗಲು ನೂರಾರು ಕಿ. ಮೀ. ಲಗೇಜು, ಕುಟುಂಬ ಸಮೇತ ಊರುಗಳಿಗೆ ಮರಳಿದ, ಇನ್ನೂ ಅತಂತ್ರರಾಗಿರುವ ಈ ದೇಶಕ್ಕಾಗಿ ದುಡಿದ ವಲಸೆ ಕಾರ್ಮಿಕರ ಮಕ್ಕಳು ಹಿಡಿ ಅನ್ನಕ್ಕಾಗಿ ಕೈಚಾಚಿದಂತೆ ಗೋಚರಿಸುವುದಿಲ್ಲವೇ ಪ್ರಶಸ್ತಿ ಫಲಕ!!!!
  7. ದಶಕಗಳಿಂದ ಉತ್ತಿ ಬಿತ್ತಿ ಜೀವ ಸವೆಸಿರುವ ಭೂಹೀನರಿಗೆ ನೀಡಬೇಕಿರುವ ಸಾಗುವಳಿ ಪತ್ರ ಮತ್ತು ವಸತಿ ರಹಿರಿಗೆ ಕೊಡಬೇಕಿರುವ ಹಕ್ಕು “ಪತ್ರ ಪ್ರಶಸ್ತಿ” ಪತ್ರಕ್ಕಿಂತ ಹೆಚ್ಚು ಮೌಲ್ಯಯುತವಾದುದಲ್ಲವೇ??
  8. ಗಾಂಧಿ ಪ್ರತಿಪಾದಿಸಿದ ಮೌಲ್ಯ ಗಳು ಹಿನ್ನಲೆಗೆ ಸರಿದು ಗೂಡ್ಸೆ ಸಂಸ್ಕೃತಿ ಮುನ್ನೆಲೆಗೆ ಬರುತ್ತಿರುವ ಕಾಲಘಟ್ಟದಲ್ಲಿ Gandhian collective India ದ ಸತ್ಯಾಗ್ರಹಿಯಾದ ನಾನು ಪ್ರಶಸ್ತಿ ಬಯಸುವುದು ಗಾಂಧಿ ಮತ್ತು ಇತಿಹಾಸಕ್ಕೆ ಅಪಚಾರ ಎಸಗಿದಂತಲ್ಲವೇ??
  9. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯ, ಕೋಮು ಗಲಭೆ, ವೈಚಾರಿಕ ಚಿಂತಕರ ಬಂಧನ ಮುಂತಾದವುಗಳು ತಗ್ಗಿಲ್ಲ, ಗೌರಿ, ಕಲ್ಬುರ್ಗಿಯಂತಹ ವಿಚಾರವಾದಿಗಳನ್ನು ಕಳೆದು ಕೊಂಡಿರುವ ವಿಜ್ಞಾನ ಸಂಘಟನೆಗಳ ಕಾರ್ಯಕರ್ತನಾದ ನಾನು ನನ್ನ ವಿವೇಕ ಮತ್ತು ಆತ್ಮ ಸಾಕ್ಷಿಗೆ ಅನುಗುಣವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವುದಿಲ್ಲ.

ನನ್ನ ಈ ನಿರ್ಧಾರ ಅಹಂಕಾರ, ಮೂರ್ಖತನ, ದಡ್ಡತನ ಮುಂತಾಗಿ ಭಾವಿಸಬಹುದು. ಅದ್ಯಾವುದೂ ಅಲ್ಲ. ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

ನಮಸ್ಕಾರ,
~ರಾಮಕೃಷ್ಣಪ್ಪ

ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...