Homeಮುಖಪುಟಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ - ಮಾಹಿತಿಯೇ...

ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ ಕೇಂದ್ರ

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದಲೇ ಸುಮಾರು 216 ಮಂದಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಎರಡು ದಿನಗಳಿಂದ ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿದ್ದು ವಲಸೆ ಕಾರ್ಮಿಕರ ಸಾವು, ಅವರು ಅನುಭವಿಸಿದ ಸಂಕಷ್ಟದ ಕುರಿತು ಚರ್ಚೆಯಾಗುತ್ತಿದೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿರುವ 10 ಮಂದಿ ಸಂಸದರು ಕೊರೊನ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವನ್ನಪಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಖಾತ ಸಚಿವ ಸಂತೋಷ್ ಗಂಗವಾರ್ ಸಂಸತ್ ಅಧಿವೇಶನದಲ್ಲಿ ಉತ್ತರ ನೀಡಿ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಸಾವಿನ ಕುರಿತು ಯಾವುದೇ ಡಾಟಾ ನಿರ್ವಹಣೆ ಮಾಡಿಲ್ಲ ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಯ ರಾಜ್ಯ ಸಚಿವ ಗಂಗವಾರ್ ಉತ್ತರದಿಂದ ಕ್ರೋಧಗೊಂಡಿರುವ ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಬೇಕೆಂದೇ ವಲಸೆ ಕಾರ್ಮಿಕರ ಸಾವು ಪ್ರಕರಣಗಳನ್ನು ಮುಚ್ಚಡಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿವೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲೇ ಮನೆ ತಲುಪುವಂತಹ ಕ್ಷಿಷ್ಟಕರ ಸನ್ನಿವೇಶವನ್ನು ಸೃಷ್ಟಿಸಿತು. ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ ಪರಿಣಾಮ ವಲಸೆ ಕಾರ್ಮಿಕರು ಬಿರುಬಿಸಿಲಿನಲ್ಲೇ ತಮ್ಮ ಹಳ್ಳಿಗಳತ್ತ ಸಾಗಿದರು. ಹಲವರು ಮೃತಪಟ್ಟರು ಎಂದು ಟೀಕಿಸಿವೆ.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್

photo courtesy: Al Jazeera

ಇದಾದ ಬಹುದಿನಗಳ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಶ್ರಮಿಕ ರೈಲುಗಳು, ಬಸ್‌ಗಳು ಮತ್ತು ಖಾಸಗಿ ವಾಹನಗಳ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ನಗರ ಕೇಂದ್ರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಸಾಗಲು ಮುಗಿಬೀಳುವಂತಹ ಸನ್ನಿವೇಶ ನಿರ್ಮಾಣವಾಯಿತು. ಇಲ್ಲಿಯೂ ಕೂಡ ವಲಸೆ ಕಾರ್ಮಿಕರು ತೊಂದರೆ ಅನುಭವಿಸಿದರು ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ವಲಸೆ ಕಾರ್ಮಿಕರ ಸಾವು ಪ್ರಕರಣಗಳ ಮಾಹಿತಿ ಸಂಗ್ರಹಿಸಿರುವ ದಿವೈರ್.ಕಾಂ ಕೊರೊನ ಅವಧಿಯಲ್ಲಿ 80 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಕೊರೊನ ಸೋಂಕಿನಿಂದ ಬಳಲುತ್ತಿದ್ದ ವಲಸೆ ಕಾರ್ಮಿಕರು ವಿಶೇಷ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ದಿವೈರ್ ವರದಿ ಮಾಡಿದೆ.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಲಸೆ ಕಾರ್ಮಿಕರ ರಕ್ಷಣೆಯಲ್ಲಿ ಎಡವಿದ ಕೇಂದ್ರ; ಸುಳ್ಳುಸುದ್ಧಿಗಳ ಮೇಲೆ ಆರೋಪ!
PC: Prajavani

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಗೌರಿ ಲಂಕೇಶ್‌ – ನ್ಯಾಯಪಥ ವಾರಪತ್ರಿಕೆಯನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು https://bit.ly/3huPexp ಕ್ಲಿಕ್ಕಿಸಿ.

ನಾನುಗೌರಿ ವಾಟ್ಸಪ್‌ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...