Homeಮುಖಪುಟಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

#NationalUnemploymentDay ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು‌ ಮಾಡಿದ್ದಾರೆ.

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರ 70 ನೇ ಜನ್ಮದಿನ. ಅನೇಕ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಪ್ರಧಾನಿಗೆ ವಿಶೇಷ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗಿತ್ತು. ಇಂದು ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು‌ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿಯವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ. ಎಂದು #NationalUnemploymentDay  ಹ್ಯಾಶ್‌ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ. 

ಇದನ್ನೂ ಓದಿ: ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇತ್ತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಧಾನಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಅಯುರಾರೋಗ್ಯ ದಯಪಾಲಿಸಲೆಂದು ನಾನು ಈ ಸಂದರ್ಭದಲ್ಲಿ ಕೋರುತ್ತೇನೆ ಎಂದು ಶುಭಕೋರಿ ಮತ್ತೆ ಇನ್ನೊಂದು ಟ್ವೀಟ್ ಮುಖಾಂತರ ಕಾಲೆಳೆದಿದ್ದಾರೆ. ಕೋವಿಡ್, ಚೀನಾ ತಂಟೆ, ಆರ್ಥಿಕತೆ ಕುಸಿತ, ನಿರುದ್ಯೋಗದಂಥ ಸಮಸ್ಯೆ ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ಭಗವಂತ ಕರುಣಿಸಲಿ ಎಂಬ ಜನಾಶಯದ ಹಾರೈಕೆಯೂ ನನ್ನದು ಕೂಡ ಎಂದಿದ್ದಾರೆ.

ಈಗಾಗಲೇ ರಾತ್ರಿಯಿಂದ #NationalUnemploymentDay ಟ್ರೆಂಡಿಂಗ್‌ನಲ್ಲಿದ್ದು, ಇದಕ್ಕೆ ನಾಯಕರ ಟ್ವೀಟ್‌ಗಳು ಸೇರಿಕೊಂಡಿವೆ.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...