Homeಮುಖಪುಟಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ.

- Advertisement -
- Advertisement -

ಕಳೆದ ವರ್ಷದ ಪುಲ್ವಾಮ ಘಟನೆ ನಡೆದ ಹೆದ್ದಾರಿಯ ಬಳಿ 52 ಕೆ.ಜಿ ಗಳಷ್ಟು ಸ್ಫೋಟಕಗಳನ್ನು ಪತ್ತೆಹಚ್ಚಿರುವ ಭಾರತೀಯ ಸೈನಿಕರು, ಮತ್ತೊಂದು ಪುಲ್ವಾಮಾ ದಾಳಿಯನ್ನು ತಪ್ಪಿಸಿದ್ದಾರೆ.

“ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು ಸಿಕ್ಕಿದ್ದು, ಇವು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ನಡೆದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ. ತಲಾ 125 ಗ್ರಾಂ ಹೊಂದಿರುವ ಒಟ್ಟು 416 ಪ್ಯಾಕೆಟ್ ಸ್ಫೋಟಕಗಳಿದ್ದವು” ಎಂದು ಸೇನೆಯು ಹೇಳಿಕೆ ನಿಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸ್ಫೋಟಕಗಳನ್ನು “ಸೂಪರ್ 90” ಎಂದು ಅಧಿಕಾರಿಗಳು ಗುರುತಿಸಿದ್ದು, ಅವು ಪತ್ತೆಯಾದ ಸ್ಥಳವು ಹೆದ್ದಾರಿಗೆ ಬಹಳ ಹತ್ತಿರದಲ್ಲಿದೆ ಮತ್ತು 2019 ರ ಪುಲ್ವಾಮಾ ದಾಳಿ ಸ್ಥಳದಿಂದ 9 ಕಿ.ಮೀ. ದೂರದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ಬಳಿ 2019ರ ಮಾದರಿಯ ಸ್ಪೋಟಕ ದಾಳಿಯನ್ನು ವಿಫಲಗೊಳಿಸಿದ ಭದ್ರತಾ ಪಡೆ

ಕಳೆದ ವರ್ಷ ಫೆಬ್ರವರಿ 14 ರಂದು, ಸ್ಫೋಟಕಗಳನ್ನು ಹೊತ್ತ ಕಾರೊಂದು ಸಿಆರ್‌ಪಿಎಫ್ ಸೈನಿಕರಿದ್ದ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ 40 ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಜೆಲಾಟಿನ್ ಸ್ಟಿಕ್‌ಗಳ ಜೊತೆಗೆ ಸುಮಾರು 35 ಕೆಜಿ ಆರ್‌ಡಿಎಕ್ಸ್ ಪ್ಲಾಸ್ಟಿಕ್ ಸ್ಫೋಟಕಗಳನ್ನು ದಾಳಿಯಲ್ಲಿ ಬಳಸಲಾಗಿತ್ತು.

ಪುಲ್ವಾಮಾ ದಾಳಿಯ ಹಿಂದಿನ ಪ್ರಮುಖ ಸಂಚುಕೋರ ಮಸೂದ್ ಅಜರ್. ಈತ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದು, ಆತನ ಇಬ್ಬರು ಸಹೋದರರಾದ ರೌಫ್ ಅಜ್ಗರ್ ಮತ್ತು ಮೊಹಮ್ಮದ್ ಅಮ್ಮರ್ ಕೂಡ ಈ ಸಂಚಿನಲ್ಲಿ ಭಾಗವಹಿಸಿದ್ದರು ಎಂದು ಎಎನ್‌ಐ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ಪುಲ್ವಾಮ ದಾಳಿ: ಬರೋಬ್ಬರಿ 18 ತಿಂಗಳ ನಂತರ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌‌ಐಎ

ಮೊಹಮ್ಮದ್ ಉಮರ್ ಫಾರೂಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಅದು ತಿಳಿಸಿದೆ. ಈತನೆ ಆರ್‌ಡಿಎಕ್ಸ್ ಸ್ಫೋಟಕಗಳನ್ನ ಪಾಕಿಸ್ತಾನದ ಗಡಿಯಿಂದ ಕಾಶ್ಮೀರಕ್ಕೆ ತಂದಿದ್ದು, ದಾಳಿಗೆ ಬೇಕಾಗಿದ್ದ ಐಇಡಿ ಬಾಂಬ್‌ಗಳನ್ನು ಸ್ಥಳೀಯವಾಗಿ ತಯಾರಿಸಲು ಈತನ ಪಾತ್ರ ಇದೆ ಎನ್ನಲಾಗಿದೆ.

13,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಜೈಶ್ ಭಯೋತ್ಪಾದಕರು ಮತ್ತೊಂದು ದಾಳಿ ನಡೆಸಲು ಯೋಜಿಸಿದ್ದಾರೆ ಮತ್ತು ಫಿಡಾಯೀನ್ ಅಥವಾ ಆತ್ಮಾಹುತಿ ಬಾಂಬರ್‌ಗಳನ್ನು ಸಹ ಸಿದ್ಧಪಡಿಸಿದ್ದಾರೆ ಎಂದು ತಿಳಿಸಿತ್ತು. ಆದರೆ ಬಾಲಕೋಟ್‌ನಲ್ಲಿ ಭಾರತದ ವಾಯುದಾಳಿಯಿಂದ ಅದಕ್ಕೆ ತಡೆಯೊಡ್ಡಿದರು.

ಅದಾಗ್ಯೂ, ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿತ್ತು. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು ಎಂದು ಕೆಲವು ಆರೋಪಗಳು ಕೇಳಿಬಂದಿದೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ ವರ್ಷ ತುಂಬಿದ ಸಂದರ್ಭದಲ್ಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಕ್ಕೆ 3 ಪ್ರಶ್ನೆಗಳನ್ನು ಕೇಳಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ “ಇಂದು ನಾವು ಪುಲ್ವಾಮಾ ದಾಳಿಯಲ್ಲಿ ನಮ್ಮ 40 ಸಿಆರ್‌ಪಿಎಫ್ ಹುತಾತ್ಮರನ್ನು ನೆನಪಿಸಿಕೊಳ್ಳುತ್ತಾ, ಕೆಲವು ಪ್ರಶ್ನೆಗಳನ್ನು ಕೇಳೋಣ:

1. ದಾಳಿಯಿಂದ ಹೆಚ್ಚು ಲಾಭ ಪಡೆದವರು ಯಾರು?

2. ದಾಳಿಯ ವಿಚಾರಣೆಯ ಫಲಿತಾಂಶ ಏನು?

3. ಭದ್ರತಾ ಲೋಪ ಎಸಗುವ ಮೂಲಕ ದಾಳಿಗೆ ಅವಕಾಶ ನೀಡಿದ್ದಕ್ಕಾಗಿ ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆಗಾರರಾಗಿದ್ದಾರೆ?” ಎಂದು ಪ್ರಶ್ನೆ ಮಾಡಿದ್ದರು.

ಅಷ್ಟೇ ಅಲ್ಲದೆ, ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಹೆಚ್ಚಿದೆ ಎಂಬುದು ಗಮನಹರಿಸಬೇಕಾದ ಅಂಶವಾಗಿದೆ.


ಇದನ್ನೂ ಓದಿ: ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...