Homeಅಂಕಣಗಳುಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ?

- Advertisement -
- Advertisement -

‘ನನ್ನ ತಾಯಿನುಡಿಯು ನಿನ್ನ ಪ್ರಭುತ್ವದ ಅಡಿಪಾಯಗಳನ್ನು ಅಲ್ಲಾಡಿಸತೊಡಗಿದ್ದರೆ, ನೀನು ನಿನ್ನ ರಾಜ್ಯವನ್ನು ನನ್ನ ನೆಲದ ಮೇಲೆ ಕಟ್ಟಿದ್ದೀಯಾ ಎಂದೇ ಅರ್ಥ’- ತುರ್ಕಿ ಸರ್ಕಾರ 1992ರಲ್ಲಿ ಹತ್ಯೆ ಮಾಡಿದ ಕುರ್ಡಿಶ್ ಬರೆಹಗಾರ ಮೂಸಾ ಅ್ಯಂಟರ್‌ನ ಈ ನುಡಿಗಳಲ್ಲಿ ಸಾರ್ವತ್ರಿಕ ಸತ್ಯವೊಂದು ನಿಹಿತವಾಗಿದೆ.

ರಾಜಕೀಯ ಜನತಾಂತ್ರಿಕ ವ್ಯವಸ್ಥೆಯನ್ನು ಒಂದೆಡೆ ಗೌರವಿಸುತ್ತ, ಮತ್ತೊಂದೆಡೆ ಭಾಷಾ ಜನತಂತ್ರವನ್ನು ತುಳಿಯುವುದು ಆಷಾಡಭೂತಿತನ ಅಲ್ಲವೇ? ‘ಒಂದು ದೇಶ, ಒಂದು ಧರ್ಮ, ಒಂದು ಭಾಷೆ, ಒಂದು ಪಕ್ಷ, ಒಬ್ಬ ನಾಯಕ’ ಎಂಬುದು ಪರಿಶುದ್ಧ ಫ್ಯಾಸಿಸಮ್ಮೇ ವಿನಾ ಜನತಂತ್ರ ಅಲ್ಲ. ಹಿಂದಿ-ಹಿಂದು-ಹಿಂದುಸ್ತಾನ ಎಂಬ ಸಾಂಸ್ಕೃತಿಕ ರಾಷ್ಟ್ರವಾದದ ಘೋಷಣೆ ಕೋಮುವಾದ- ಬಹುಸಂಖ್ಯಾತವಾದದ ಹೆಗ್ಗುರುತು.

ನರೇಂದ್ರ ಮೋದಿ ಸರ್ಕಾರದ ಸೈದ್ಧಾಂತಿಕ ಬೇರುಗಳು ಹಿಂದೀ-ಹಿಂದು-ಹಿಂದುತ್ವವಾದಿ ಚಿಂತನೆಯ ಮೂಲದವು. ಹೀಗಾಗಿ ಅವರು ಅಧಿಕಾರ ಹಿಡಿದೊಡನೆ ಹಿಂದೀ ಭಾಷೆಗೆ ದೊರೆಯತೊಡಗಿರುವ ಅಗ್ರಪ್ರಾಶಸ್ತ್ಯವು ಕಳೆದ ಐದಾರು ವರ್ಷಗಳಲ್ಲಿ ‘ಹಿಂದೀ ಸಾಮ್ರಾಜ್ಯಶಾಹಿ’ಯ ಆತಂಕವನ್ನು ಹುಟ್ಟಿಹಾಕಿದೆ.

2011ರ ಜನಗಣತಿಯ ಪ್ರಕಾರ ಭಾರತದಲ್ಲಿ ದಾಖಲಿಸಿರುವ ಆಡು ಭಾಷೆಗಳು 19,569. ಹತ್ತು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 40. ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮಾತಾಡುವ ಭಾಷೆಗಳು 60. ಹತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಆಡುವ ಭಾಷೆಗಳ ಸಂಖ್ಯೆ 122. ಸಂಸ್ಕೃತವನ್ನು ತಮ್ಮ ತಾಯಿನುಡಿ ಎಂದು ಈ ಜನಗಣತಿಯಲ್ಲಿ ಬರೆಯಿಸಿರುವವರ ಸಂಖ್ಯೆ 24,821. ಕೇಂದ್ರ ಸರ್ಕಾರದ ಭಾಷಾ ಅಭಿವೃದ್ಧಿ ಯೋಜನೆಗಳ ಸಿಂಹಪಾಲು ಸಲ್ಲುತ್ತಿರುವುದು ಸಂಸ್ಕೃತಕ್ಕೇ.

19ನೆಯ ಶತಮಾನದಲ್ಲಿ ಮುಸಲ್ಮಾನರ ಭಾಷೆಯೆಂದು ಹಣೆಪಟ್ಟಿ ಹಚ್ಚಲಾದ ಉರ್ದುವನ್ನು (ಪರ್ಷಿಯನೀಕೃತ ಹಿಂದುಸ್ತಾನಿ) ತೊಲಗಿಸಿ ಅದರ ಜಾಗದಲ್ಲಿ ಸಂಸ್ಕೃತೀಕೃತ ಹಿಂದುಸ್ತಾನಿಯಾದ ಹಿಂದಿಗೆ ಪಟ್ಟ ಕಟ್ಟುವ ಮೇಲಾಟ ಜರುಗಿತು. ಉರ್ದು ಮುಸ್ಲಿಮ್ ಆದರೆ ಹಿಂದೀ ಹಿಂದೂ ಆಯಿತು. ಹಿಂದೀ ಭಾಷಿಕರ ಸಂಖ್ಯೆಯನ್ನು ಉಬ್ಬಿಸಿ ಸತ್ಯದೂರ ಕಥನ ಕಟ್ಟಲಾಯಿತು. ಅಂದಿನ ಬ್ರಿಟಿಷ್ ಆಡಳಿತವನ್ನು ನಂಬಿಸುವ ಈ ತಂತ್ರ ಫಲ ನೀಡಿತು. ಉರ್ದು ಅದಾಗಲೇ ಆಡಳಿತ ಭಾಷೆಯಾಗಿತ್ತು. ಅದರೊಂದಿಗೆ ಹಿಂದಿಗೂ ಆಡಳಿತ ಭಾಷೆಯ ಸ್ಥಾನ ಗಿಟ್ಟಿತು. ಅಲ್ಲಿಯತನಕ ನ್ಯಾಯಾಲಯದ ದಾಖಲೆ ದಸ್ತಾವೇಜುಗಳು ಕೇವಲ ಉರ್ದುವಿನಲ್ಲೇ ಇರುತ್ತಿದ್ದ ಕಾರಣ, ಆ ಭಾಷೆಯನ್ನು ಅರಿಯದ ಜನಕ್ಕೆ ದಾಖಲೆಗಳಲ್ಲಿ ಏನು ಬರೆದಿದೆಯೆಂದೇ ಅರ್ಥವಾಗುತ್ತಿರಲಿಲ್ಲ. ದೇಶವಿಭಜನೆಯ ನಂತರ ಇದೇ ಪರಿಸ್ಥಿತಿಯನ್ನು ಹಿಂದೀ ಭಾಷಿಕರಲ್ಲದವರು ಎದುರಿಸಬೇಕಾಯಿತು. ಉದಾಹರಣೆಗೆ ಐಎಎಸ್-ಐಪಿಎಸ್ ಮುಂತಾದ ಸಿವಿಲ್ ಸರ್ವೀಸಸ್ ಪ್ರವೇಶ ಪರೀಕ್ಷೆಗಳು, ಐಐಟಿ ಮತ್ತು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗಳ ಪ್ರವೇಶ ಪರೀಕ್ಷೆಗಳನ್ನು ಹಿಂದಿಯ ವಿನಾ ಉಳಿದ ಯಾವುದೇ ಮಾತೃಭಾಷಾ ಮಾಧ್ಯಮಗಳಲ್ಲಿ ಬರೆಯುವಂತಿಲ್ಲ. ಅಲಹಾಬಾದ್ ಹೈಕೋರ್ಟ್ ತನ್ನ ವ್ಯವಹಾರಗಳನ್ನು ಹಿಂದಿಯಲ್ಲಿ ನಡೆಸಲು ಅವಕಾಶ ನೀಡಲಾಗಿದೆ. ಆದರೆ ದಕ್ಷಿಣ ರಾಜ್ಯಗಳ ಹೈಕೋರ್ಟುಗಳು ಪ್ರಾದೇಶಿಕ ಭಾಷೆಗಳಲ್ಲಿ ವ್ಯವಹರಿಸಲು ಅವಕಾಶ ನಿರಾಕರಿಸಲಾಗಿದೆ. ಕಡೆಗೆ ಸಂವಿಧಾನದ ಪಠ್ಯದ ವಿಷಯದಲ್ಲೂ ಅಷ್ಟೇ. ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪಠ್ಯಗಳು ಮಾತ್ರವೇ ಸರ್ಕಾರದಿಂದ ಮಾನ್ಯತೆ ಪಡೆದ ಪಠ್ಯಗಳು.

ಹಿಂದಿಯ ದೈತ್ಯ ರಥಚಕ್ರಗಳಡಿ ದಕ್ಷಿಣದ ಭಾಷೆಗಳಿರಲಿ, ಉತ್ತರ ಭಾರತದ ತಾಯಿನುಡಿಗಳೂ ನುಗ್ಗಾಗತೊಡಗಿವೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚು ತಲುಪಿವೆ. ಭೋಜಪುರಿ, ಅವಧಿ, ಹರಿಯಾಣ್ವಿ, ಆದಿವಾಸಿ ಭಾರತದ ಗೊಂಡಿ, ಒರಾನಿ, ಸಂತಾಲ್, ಮುಂದಾರಿ ಇತ್ಯಾದಿ ಭಾಷೆಗಳು, ಬಿಹಾರ, ಝಾಖರ್ಂಡ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತಾಡುವ ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿ ಹಿಂದೀ ಹೇರಿಕೆ- ದಬ್ಬಾಳಿಕೆಯ ಕಾರಣ ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮಾತಾಡುವವರ ಸಂಖ್ಯೆ 3.80 ಕೋಟಿ ಮಂದಿ. ವಿಶ್ವದ 29ನೆಯ ಅತಿಹೆಚ್ಚು ಜನಸಂಖ್ಯೆ ಮಾತಾಡುವ ಭಾಷೆಯಿದು. ಫಿಜಿ ಹಿಂದೀ ಎಂಬ ಹೆಸರು ಪಡೆದು ಆ ದೇಶದಲ್ಲಿ ಈ ನುಡಿಗಟ್ಟು ಬದುಕಿರುವುದು ವಿಡಂಬನೆಯೇ ಸರಿ. ಹಾಗೆಯೇ ಭೋಜಪುರಿ ಭಾಷಿಕರ ಸಂಖ್ಯೆ ನಾಲ್ಕು ಕೋಟಿ. ಇದನ್ನೂ ಹಿಂದಿಯ ಲೆಕ್ಕಕ್ಕೆ ಸೇರಿಸಿ ಎಣಿಸಿಕೊಳ್ಳಲಾಗಿದೆ. ಈ ಎಲ್ಲವೂ ಹಿಂದಿ ಭಾಷೆಯ ಭಿನ್ನ ನುಡಿಗಟ್ಟುಗಳು ಎಂಬ ಸುಳ್ಳನ್ನು ಪ್ರಚಾರ ಮಾಡಿಕೊಂಡು ಬರಲಾಗಿದೆ. ಈ ಭಾಷಿಕರನ್ನೂ ಹಿಂದಿ ಮಾತೃಭಾಷಿಕರೆಂಬ ಲೆಕ್ಕಕ್ಕೆ ಸೇರಿಸಿಕೊಂಡಿರುವುದು ಜನಗಣತಿಗಳ ಮಹಾಮೋಸ. ಮುತ್ತಿಗೆ ಹಾಕಿರುವ ಹಿಂದಿ ದಬ್ಬಾಳಿಕೆಯನ್ನು ಈ ನುಡಿಗಟ್ಟುಗಳು ಒಪ್ಪಿಕೊಳ್ಳತೊಡಗಿವೆ. ತಮ್ಮ ಭಾಷೆ ಹಿಂದಿ ಎಂದೇ ಬರೆಯಿಸತೊಡಗಿವೆ. ಈ ವಂಚನೆಯ ಲೆಕ್ಕ ಹಿಡಿದರೆ ಅಸಲಿ ಹಿಂದಿ ಸಮುದ್ರದ ಪುಟ್ಟ ದ್ವೀಪಗಳಾಗಿರುವ ಅವುಗಳಿಗೆ ಕನ್ನಡ, ತೆಲುಗು, ತಮಿಳು ಮಲೆಯಾಳದಂತಹ ರಕ್ಷಣೆ, ಮೂಲಸೌಲಭ್ಯಗಳು ಇಲ್ಲ. ಹೀಗಾಗಿ ಶರಣಾಗದೆ ವಿಧಿಯಿಲ್ಲ. ಹೀಗಾಗಿ ಹೊಸ್ತಿಲೊಳಗಣ ಭಾಷೆಗಳಾಗಿಯೂ, ಅಡಿಗೆ ಮನೆ, ಹಿತ್ತಿಲ ಭಾಷೆಗಳಾಗಿಯೂ ಮೂಲೆಗುಂಪಾಗತೊಡಗಿವೆ. ಹಿಂದಿ ಭಾಷಿಕರ ಪ್ರಮಾಣ ಶೇ.43.63 ರಿಂದ ಶೇ.20ಕ್ಕೆ ಕುಸಿಯುತ್ತದೆ.

ಹಿಂದಿ
Courtesy: Facebook

ಉತ್ತರ ಭಾರತ ನಿಜವಾಗಿಯೂ ಹಿಂದಿ ಭಾಷಿಕ ಸೀಮೆಯೇ ಆಗಿದ್ದಲ್ಲಿ ಪ್ರತಿವರ್ಷ ಅಲ್ಲಿ ಲಕ್ಷಾಂತರ ಶಾಲಾಮಕ್ಕಳು ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಫೇಲಾಗುತ್ತಿರುವುದು ಯಾಕೆ? ಉದಾಹರಣೆಗೆ 2019ರಲ್ಲಿ ಹತ್ತು ಮತ್ತು ಹನ್ನೆರಡನೆಯ ತರಗತಿಗಳ ಹಿಂದಿ ಪರೀಕ್ಷೆಗಳಲ್ಲಿ ಹತ್ತು ಲಕ್ಷ ವಿದ್ಯಾರ್ಥಿಗಳು ಫೇಲಾದರು. ಈ ಬೆಳವಣಿಗೆಯ ಹಿಂದಿನ ಕಟುಸತ್ಯವೆಂದರೆ ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಅವರ ಮಾತೃಭಾಷೆಗಳು ನೂರಾರು ಇಲ್ಲವೇ ಸಾವಿರಾರು ವರ್ಷಗಳಿಂದ ವಿಕಾಸಗೊಂಡು ಭಾಷಿಕರ ಬಾಯಲ್ಲಿ ನಲಿಯುವಂತಹವು. ಅವರ ಬದುಕುಗಳೊಂದಿಗೆ ಬೆಸೆದುಕೊಂಡಂತಹವು. ಸಂಸ್ಕೃತ ಭೂಯಿಷ್ಟ ಹಿಂದಿ ಭಾಷೆಗೆ ಹೋಲಿಸಿದರೆ ಸುಲಿದ ಬಾಳೆ ಅಥವಾ ತಣಿದ ಉಷ್ಣದ ಹಾಲಿನಂತಹವು.

ಭಾಷೆಯೊಂದು ಸಾಯುವುದೆಂದರೆ ಸಂವಹನದ ಮಾಧ್ಯಮವೊಂದು ಸತ್ತಂತೆ. ಆ ಭಾಷೆಯನ್ನು ಆಡುವ ಜನರ ಇತಿಹಾಸ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಸ್ಕೃತಿಯ ಮುಂದುವರಿಕೆ ಮುರಿದುಬಿದ್ದಂತೆ. ರಾಜಸ್ತಾನಿ ಭಾಷೆಯಲ್ಲಿ ಒಂಟೆಗೆ 45 ಭಿನ್ನ ಹೆಸರುಗಳಿವೆಯಂತೆ. ಅಂತೆಯೇ ತಿಂಗಳು ತಿಂಗಳಿಗೂ ಬದಲಾಗುವ ಮೋಡಗಳಿಗೂ ಅಷ್ಟೇ ಸಂಖ್ಯೆಯ ಹೆಸರುಗಳಿವೆಯಂತೆ. ಈಗ ಅಳಿದುಹೋಗಿರುವ ಭಾಷೆಗಳಲ್ಲೂ ಇಂತಹ ಸಿರಿವಂತಿಕೆ ಇದ್ದಿರಬಹುದು. ಕಳೆದ ಐವತ್ತು ವರ್ಷಗಳಲ್ಲಿ 220 ಭಾರತೀಯ ಭಾಷೆಗಳನ್ನು ಕೊಂದು ಹುಗಿಯಲಾಗಿದೆ.

ಹಿಂದಿ ಭಾಷಿಕರ ಪ್ರಮಾಣ ಶೇ.43 ಎಂದು ವಾದಕ್ಕಾಗಿ ಒಂದು ಗಳಿಗೆ ಒಪ್ಪಿಕೊಂಡರೂ, ಹಿಂದಿ ಮಾತೃಭಾಷೆ ಅಲ್ಲದವರ ಪ್ರಮಾಣ ಶೇ.57ರಷ್ಟಿದೆ ಎಂದಾಯಿತು. ಶೇ. 20 ಮಂದಿ ಆಡುವ ಭಾಷೆಯನ್ನು ಶೇ.80 ಮಂದಿಯ ಮೇಲೆ ಹೇರುವುದು ಸಾಂಸ್ಕೃತಿಕ ಸರ್ವಾಧಿಕಾರ.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...