Homeಅಂಕಣಗಳುಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ... ನಾವೇನು ಮಾಡಬೇಕು?

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ.

- Advertisement -
- Advertisement -

ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ ಮಾತುಗಳನ್ನು ಆಡಿದ್ದಾರೆ. ಆದರೆ, ಸಮಸ್ಯೆಯೇನೆಂದರೆ ಮಾಧ್ಯಮಗಳನ್ನು ನಿಯಂತ್ರಣ ಮಾಡಬೇಕೆಂದು ಕೋರ್ಟು ಸೂಚಿಸಿದಲ್ಲಿ, ಆ ನಿಯಂತ್ರಣವನ್ನು ಯಾರು ಮಾಡುತ್ತಾರೆ ಮತ್ತು ಯಾರನ್ನು ಮಾಡುತ್ತಾರೆ ಎಂಬ ಪ್ರಶ್ನೆ ಏಳುತ್ತದೆ. ಏಕೆಂದರೆ ಎಲ್ಲಾ ನಿಯಂತ್ರಕ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಯಂತ್ರಣಕ್ಕೆ ತೆಗೆದುಕೊಂಡಾಗಿದೆ. ಅಂತಹ ಸಾಧ್ಯತೆಯು ಬೇರೆ ಸರ್ಕಾರಗಳಿರುವಾಗಲೂ ಇದೆ. ಹೀಗಾಗಿ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯಾರೂ ಇಂತಹ ನಿಯಂತ್ರಣವನ್ನು ಎಂತಹ ಸಂದರ್ಭದಲ್ಲೂ ಒಪ್ಪುವುದಿಲ್ಲ.

ಹಾಗೆಂದು, ಮಾಧ್ಯಮಗಳ ಮೇಲೆ ಯಾರ ಕಡಿವಾಣವೂ ಇರಬಾರದೇ ಎಂಬ ಪ್ರಶ್ನೆಯು ಏಳದೇ ಇರದು. ಏಕೆಂದರೆ ಇದುವರೆಗೆ ಪ್ರಭಾವಶಾಲಿಗಳಾಗಿರುವ ಟಿವಿ ಚಾನೆಲ್‍ಗಳಲ್ಲಿ ಹಲವು ಮಾಧ್ಯಮ ಸಂಸ್ಥೆಗಳಾಗಿ ಉಳಿದಿಲ್ಲ; ಅವು ಲಿಂಚಿಂಗ್ ಕೇಂದ್ರಗಳಾಗಿವೆ. ಇವು ಟಿವಿ ಚಾನೆಲ್‍ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಲವಾರು ಪತ್ರಿಕೆಗಳೂ ಅದನ್ನು ಮಾಡಿವೆ. ಪ್ರಜಾತಾಂತ್ರಿಕ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಿಷ್ಠುರವಾದ ಅಭಿಪ್ರಾಯವನ್ನು ಮುಂದಿಟ್ಟ ಸಾಹಿತಿಗಳ ಮೇಲೆ ಅಂತಹ ಸಮರವನ್ನು ಕನ್ನಡದ ಪತ್ರಿಕೆಯ ಸಂಪಾದಕರೊಬ್ಬರು ಆರಂಭಿಸಿದ್ದರು. ಓದುಗರ ಅಭಿಪ್ರಾಯದ ಹೆಸರಿನಲ್ಲಿ ಅವರುಗಳ ಮೇಲೆ ವಾಗ್ದಾಳಿಯನ್ನು ನಡೆಸಲಾಯಿತು. ಈ ಓದುಗರ ಅಭಿಪ್ರಾಯ ಎನ್ನುವುದಕ್ಕೊಂದು ಸಾಧ್ಯತೆ ಇರುತ್ತದೆ. ನಿರ್ದಿಷ್ಟವಾದ ರೀತಿಯ ಅಭಿಪ್ರಾಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಬಿಂಬಿಸಿ, ತಾವು ಆ ಜನಾಭಿಪ್ರಾಯವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಮಾಡುವುದು. ಹಾಗೆ ಮಾಡುವ ಮೂಲಕ ಇತರ ಓದುಗರಿಗೂ ಇದೇ ಪ್ರಬಲವಾದ ಜನಾಭಿಪ್ರಾಯ ಎಂಬ ಭಾವನೆ ಮೂಡುವಂತಾಗುತ್ತದೆ. ಸಮಾಜದ ಪ್ರಬಲ ಅಭಿಪ್ರಾಯ ಯಾವುದೋ ಅದರ ಜೊತೆಗೆ ತೂರಿಕೊಂಡು ಹೋಗುವ ಮಂದೆ ಸ್ವಭಾವ ಯಾವುದೇ ಸಮಾಜದಲ್ಲಿ ಸಾಕಷ್ಟಿರುವುದರಿಂದ, ನಿರ್ದಿಷ್ಟವಾದ ಜನಾಭಿಪ್ರಾಯವನ್ನು ಆ ಮೂಲಕ ಉತ್ಪಾದಿಸಲಾಗುತ್ತದೆ.

ಇಂತಹುದನ್ನು ಮಾಡಲು ಶುರು ಮಾಡಿದ ಮಾಧ್ಯಮಗಳು ಯಾವ ಮಟ್ಟಕ್ಕೆ ಮುಟ್ಟಿದವೆಂದರೆ, ಕರ್ನಾಟಕದ ಖ್ಯಾತ ವಿದ್ವಾಂಸ ಕಲಬುರ್ಗಿಯವರಿಂದ ಅವರದ್ದಲ್ಲದ ಹೇಳಿಕೆಯನ್ನು ತಪ್ಪೆಂದು ಬಿಂಬಿಸಿ ಅವರಿಂದ ಕ್ಷಮೆಯನ್ನೂ ಕೇಳಿಸಿಬಿಟ್ಟವು. ಅದೇ ಸಂಗತಿಯು ಅವರ ಹತ್ಯೆ ಮಾಡಲು ಹೊರಟ ಕಾಲಾಳುವಿಗೆ ಉತ್ತೇಜಿಸಲು ಅನುಕೂಲ ಮಾಡಿಕೊಟ್ಟಿತು.

ಎಂ ಎಂ ಕಲಬುರ್ಗಿ. ಚಿತ್ರಕೃಪೆ: Deccan Herald

ಇಂಥದ್ದೇ ಕೆಲಸವನ್ನು ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಥರದ ಜೆಎನ್‍ಯು ವಿದ್ಯಾರ್ಥಿಗಳ ಮೇಲೂ ಮಾಡಲಾಯಿತು. 8-10 ತಿಂಗಳ ಕೆಳಗೆ ಅಮೂಲ್ಯ ಎಂಬ ವಿದ್ಯಾರ್ಥಿನಿಯು ತನ್ನ ಬಾಲಿಶತನದ ಕಾರಣಕ್ಕಾಗಿ, ಸಾರ್ವಜನಿಕ ಸಭೆಯೊಂದರಲ್ಲಿ ಏನೋ ಹೇಳಲು ಹೋಗಿ ಇನ್ನೇನೋ ಹೇಳಿದಾಗಲೂ ಅದೇ ನಡೆಯಿತು. ಅಂದು ಕನ್ನಡದ ಟಿವಿ ಚಾನೆಲ್‍ನಲ್ಲಿ ಆಂಕರ್ ಕೂಗಿದ್ದನ್ನು ಕೇಳಿದ ಅಧಿಕಾರಿಯೊಬ್ಬರು ಗಾಬರಿಯಾಗಿ ಫೋನ್ ಮಾಡಿದರು.He  is asking for her blood, how can he do like that? Something has to be done about it ಎಂದಿದ್ದರು.

ತೀರಾ ಇತ್ತೀಚೆಗೆ ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ರಾಜೀವ್ ತ್ಯಾಗಿಯವರು ಟಿವಿ ಚಾನೆಲ್ಲೊಂದರಲ್ಲಿ ಪ್ಯಾನೆಲ್ ಚರ್ಚೆ ಮುಗಿಸಿಕೊಂಡು ಮನೆಗೆ ಹೋಗಿ ಹೃದಯಾಘಾತದಿಂದ ತೀರಿಕೊಂಡರು. ಸಾಯುವ ಮುನ್ನ ಟಿವಿ ಆಂಕರ್‌ಗಳ ಕುರಿತು ಅವರಾಡಿದ ಕೊನೆ ಮಾತೆಂದರೆ, ‘ಇವರು ನನ್ನನ್ನು ಅವಹೇಳನ ಮಾಡಿದರು, ನನ್ನನ್ನು ಕೊಂದುಬಿಟ್ಟರು’. ಇದನ್ನು ಕೇಳಿದ ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್‍ರಿಗೆ ‘ಟಿವಿಗೊಂದು ನೀತಿ ಸಂಹಿತೆ ರೂಪಿಸಲು’ ಆನ್‍ಲೈನ್ ಪಿಟಿಷನ್ ಆರಂಭಿಸಿದ್ದಾರೆ.

ರಾಜೀವ್ ತ್ಯಾಗಿ:Photo Courtesy: National Herald

ಟಿವಿ ಆಂಕರ್‌ಗಳು ಕಿರುಚುವ ರೀತಿ, ನಿರ್ದಿಷ್ಟ ಸಮುದಾಯ, ಗುಂಪು, ವ್ಯಕ್ತಿಗಳ ವಿರುದ್ಧ ಪ್ರಚೋದಿಸುವ ರೀತಿಯನ್ನು ನೋಡಿದವರಿಗೆ ಸ್ಪಷ್ಟವಾಗುವ ಸಂಗತಿ ಏನೆಂದರೆ, ಅವರು ಲಿಂಚಿಂಗ್ (ಗುಂಪು ಹತ್ಯೆ)ಗೆ ದಾರಿ ಮಾಡಿಕೊಡುತ್ತಿದ್ದಾರೆ. ಬೇರೆ ಬೇರೆ ರೀತಿಯ ಲಿಂಚಿಂಗ್‍ಗೆ ಸಮ್ಮತಿಯನ್ನು ಉತ್ಪಾದಿಸುತ್ತಿದ್ದಾರೆ. ಇದರಲ್ಲಿ ಸಂದೇಹವೇ ಇಲ್ಲ.

ಎಂದಿನಂತೆ ಪ್ರಶ್ನೆಯಿರುವುದು ಇದರ ಕುರಿತು ಇನ್ನಷ್ಟು ವಿಶ್ಲೇಷಣೆ ಮಾಡುವುದರಲ್ಲಲ್ಲ. ಬದಲಿಗೆ ಇದನ್ನು ಹೇಗೆ ಬದಲಿಸುತ್ತೇವೆ ಎಂಬುದರಲ್ಲಿ. ಇಂದಿನ ಪರಿಸ್ಥಿತಿಯಲ್ಲಿ ಟಿವಿ ಚಾನೆಲ್‍ಗಳ ಮೇಲೆ ನಿಯಂತ್ರಣ ಹೇರಿ ಎಂದು ಸರ್ಕಾರ ಅಥವಾ ನ್ಯಾಯಾಲಯದ ಮೊರೆ ಹೋಗುವುದು ಮೂರ್ಖತನದ ಕೆಲಸವಾದೀತು. ಬದಲಿಗೆ ಪ್ರಜಾತಾಂತ್ರಿಕವಾದ ಮಾಧ್ಯಮ ಸಾಧ್ಯತೆಗಳನ್ನು ಅವಿಷ್ಕರಿಸಿ ವ್ಯಾಪಕವಾದ ಮತ್ತು ಬೃಹತ್ತಾದ ಪ್ರಮಾಣದಲ್ಲಿ ಜಾರಿಗೊಳಿಸುವುದು ಮಾತ್ರ ಇದನ್ನು ತಡೆಯಬಲ್ಲುದು ಮತ್ತು ಇಂದಿನ ಮುಖ್ಯವಾಹಿನಿಯನ್ನು ಅಪ್ರಸ್ತುತಗೊಳಿಸಬಲ್ಲದು. ಆ ನಿಟ್ಟಿನಲ್ಲಿ ಈಗಾಗಲೇ ದೇಶದ ಕೆಲವೆಡೆ ಸೃಜನಶೀಲವಾದ ಪ್ರಯತ್ನಗಳು ನಡೆಯುತ್ತಿದೆ. ಗೌರಿ ಮೀಡಿಯಾ ಸಹಾ ಅದಕ್ಕೆ ಪೂರಕವಾದ ಕೆಲಸದಲ್ಲಿ ತೊಡಗಿದೆ. ನಮ್ಮ ಪ್ರಜ್ಞಾವಂತ ಓದುಗರೂ ಜೊತೆಯಾಗುತ್ತಾರೆಂಬ ವಿಶ್ವಾಸವಿದೆ.


ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...