Homeಎಕಾನಮಿನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

"ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ"

- Advertisement -
- Advertisement -

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗಿದೆ. ಆದರೆ ಪೇಟಿಯಂನ ಇತರ ಅಪ್ಲಿಕೇಶನ್‌ಗಳಾದ Paytm for Business, Paytm Mall, Paytm Money, ಮತ್ತು ಇನ್ನೂ ಕೆಲವು ಅಪ್ಲಿಕೇಶನ್‌ಗಳು ಡೌನ್‌ಲೋಡ್‌ಗೆ ಲಭ್ಯವಿದೆ.

ಭಾರತದಲ್ಲಿ ಸುಮಾರು 50 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರನ್ನು ಪೇಟಿಯಂ ಹೊಂದಿದೆ. ಲಕ್ಷಾಂತರ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿರುವ ಪೇಟಿಎಂ ಅಪ್ಲಿಕೇಶನ್ ಅನ್ನು ತೆಗೆದುಹಾಕುವ ಹಿಂದಿನ ಕಾರಣವನ್ನು ಗೂಗಲ್ ನಿರ್ದಿಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ ಇಂದು ಪೋಸ್ಟ್ ಮಾಡಿದ ಬ್ಲಾಗ್‌ನಲ್ಲಿ ಪೇಟಿಯಂ ಗೂಗಲ್‌ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪೇಟಿಯಂ ತನ್ನ ಆಪ್ಯ್‌ನಲ್ಲಿ ಗ್ಯಾಂಬ್ಲಿಂಗ್, ಫ್ಯಾಂಟಸಿ ಕ್ರೀಡಾ ಸೇವೆಗಳನ್ನು ಮತ್ತು ಆನ್‌ಲೈನ್ ಕ್ಯಾಸಿನೋಗಳಿಗೆ ಅವಕಾಶ ಮಾಡಿಕೊಟ್ಟಿದೆ. ಡ್ರೀಮ್ 11 ನಂತಹ ಕ್ರೀಡಾ ಬೆಟ್ಟಿಂಗ್‌ಗೆ ಅನುಕೂಲವಾಗುವ ಆನ್‌ಲೈನ್ ಕ್ಯಾಸಿನೊಗಳು ಮತ್ತು ಇತರ ಅನಿಯಂತ್ರಿತ ಜೂಜಾಟದ ಅಪ್ಲಿಕೇಶನ್‌ಗಳನ್ನು ಗೂಗಲ್ ನಿಷೇಧಿಸುತ್ತದೆ ಹೀಗಾಗಿ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ನ ಆಂಡ್ರಾಯ್ಡ್ ಸೆಕ್ಯುರಿಟಿ ಮತ್ತು ಗೌಪ್ಯತೆ ಉಪಾಧ್ಯಕ್ಷೆ  ಸುಝೇನ್ ಫ್ರೇ ತಿಳಿಸಿದ್ದಾರೆ.

“ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು ಡೆವಲಪರ್‌ಗೆ ಮಾಹಿತಿ ನೀಡಿ, ಅಪ್ಲಿಕೇಶನ್ ಅನ್ನು ಮತ್ತೆ ಸರಿಪಡಿಸುವವರೆಗೆ ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ. ಮತ್ತೆ ಮತ್ತೆ ನಮ್ಮ ನೀತಿಗಳನ್ನು ಉಲ್ಲಂಘಿಸಿದರೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ” ಎನ್ನುತ್ತಾರೆ.

ಇದನ್ನೂ ಓದಿ: ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಇನ್ನೂ ಪೇಟಿಯಂ ಕೂಡ ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವುದನ್ನು ತನ್ನ ಗ್ರಾಹಕರಿಗೆ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪೇಟಿಯಂ  “ಹೊಸ ಡೌನ್‌ಲೋಡ್‌ಗಳು ಅಥವಾ ನವೀಕರಣಗಳಿಗಾಗಿ Paytm Android ಅಪ್ಲಿಕೇಶನ್ Google Play Store ನಲ್ಲಿ ತಾತ್ಕಾಲಿಕವಾಗಿ ಲಭ್ಯವಿಲ್ಲ.” ಅತಿ ಶೀಘ್ರದಲ್ಲೇ ಹಿಂತಿರುಗಲಿದೆ. ನಿಮ್ಮ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಿಮ್ಮ Paytm ಅಪ್ಲಿಕೇಶನ್ ಬಳಕೆ  ಮುಂದುವರಿಸಬಹುದು” ಎಂದಿದೆ.

ಆದರೆ ಆಪಲ್ ಆಪ್ಯ್‌ ಸ್ಟೋರ್‌ನಲ್ಲಿ ಪೇಟಿಯಂ ಡೌನ್‌ಲೋಡ್ ಮಾಡಲು ಲಭ್ಯವಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...