Homeಎಕಾನಮಿನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

"ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ"

- Advertisement -
- Advertisement -

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗಿದೆ. ಆದರೆ ಪೇಟಿಯಂನ ಇತರ ಅಪ್ಲಿಕೇಶನ್‌ಗಳಾದ Paytm for Business, Paytm Mall, Paytm Money, ಮತ್ತು ಇನ್ನೂ ಕೆಲವು ಅಪ್ಲಿಕೇಶನ್‌ಗಳು ಡೌನ್‌ಲೋಡ್‌ಗೆ ಲಭ್ಯವಿದೆ.

ಭಾರತದಲ್ಲಿ ಸುಮಾರು 50 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರನ್ನು ಪೇಟಿಯಂ ಹೊಂದಿದೆ. ಲಕ್ಷಾಂತರ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿರುವ ಪೇಟಿಎಂ ಅಪ್ಲಿಕೇಶನ್ ಅನ್ನು ತೆಗೆದುಹಾಕುವ ಹಿಂದಿನ ಕಾರಣವನ್ನು ಗೂಗಲ್ ನಿರ್ದಿಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ ಇಂದು ಪೋಸ್ಟ್ ಮಾಡಿದ ಬ್ಲಾಗ್‌ನಲ್ಲಿ ಪೇಟಿಯಂ ಗೂಗಲ್‌ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪೇಟಿಯಂ ತನ್ನ ಆಪ್ಯ್‌ನಲ್ಲಿ ಗ್ಯಾಂಬ್ಲಿಂಗ್, ಫ್ಯಾಂಟಸಿ ಕ್ರೀಡಾ ಸೇವೆಗಳನ್ನು ಮತ್ತು ಆನ್‌ಲೈನ್ ಕ್ಯಾಸಿನೋಗಳಿಗೆ ಅವಕಾಶ ಮಾಡಿಕೊಟ್ಟಿದೆ. ಡ್ರೀಮ್ 11 ನಂತಹ ಕ್ರೀಡಾ ಬೆಟ್ಟಿಂಗ್‌ಗೆ ಅನುಕೂಲವಾಗುವ ಆನ್‌ಲೈನ್ ಕ್ಯಾಸಿನೊಗಳು ಮತ್ತು ಇತರ ಅನಿಯಂತ್ರಿತ ಜೂಜಾಟದ ಅಪ್ಲಿಕೇಶನ್‌ಗಳನ್ನು ಗೂಗಲ್ ನಿಷೇಧಿಸುತ್ತದೆ ಹೀಗಾಗಿ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ನ ಆಂಡ್ರಾಯ್ಡ್ ಸೆಕ್ಯುರಿಟಿ ಮತ್ತು ಗೌಪ್ಯತೆ ಉಪಾಧ್ಯಕ್ಷೆ  ಸುಝೇನ್ ಫ್ರೇ ತಿಳಿಸಿದ್ದಾರೆ.

“ಬಳಕೆದಾರರನ್ನು ಹಾನಿಯಿಂದ ರಕ್ಷಿಸಲು ನಾವು ಈ ನೀತಿಗಳನ್ನು ಹೊಂದಿದ್ದೇವೆ. ಯಾವುದೇ ಅಪ್ಲಿಕೇಶನ್ ಈ ನೀತಿಗಳನ್ನು ಉಲ್ಲಂಘಿಸಿದಾಗ, ನಾವು ಡೆವಲಪರ್‌ಗೆ ಮಾಹಿತಿ ನೀಡಿ, ಅಪ್ಲಿಕೇಶನ್ ಅನ್ನು ಮತ್ತೆ ಸರಿಪಡಿಸುವವರೆಗೆ ನಾವು Google Play ನಿಂದ ಅಪ್ಲಿಕೇಶನ್ ಅನ್ನು ತೆಗೆದುಹಾಕುತ್ತೇವೆ. ಮತ್ತೆ ಮತ್ತೆ ನಮ್ಮ ನೀತಿಗಳನ್ನು ಉಲ್ಲಂಘಿಸಿದರೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ” ಎನ್ನುತ್ತಾರೆ.

ಇದನ್ನೂ ಓದಿ: ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಇನ್ನೂ ಪೇಟಿಯಂ ಕೂಡ ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವುದನ್ನು ತನ್ನ ಗ್ರಾಹಕರಿಗೆ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪೇಟಿಯಂ  “ಹೊಸ ಡೌನ್‌ಲೋಡ್‌ಗಳು ಅಥವಾ ನವೀಕರಣಗಳಿಗಾಗಿ Paytm Android ಅಪ್ಲಿಕೇಶನ್ Google Play Store ನಲ್ಲಿ ತಾತ್ಕಾಲಿಕವಾಗಿ ಲಭ್ಯವಿಲ್ಲ.” ಅತಿ ಶೀಘ್ರದಲ್ಲೇ ಹಿಂತಿರುಗಲಿದೆ. ನಿಮ್ಮ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಿಮ್ಮ Paytm ಅಪ್ಲಿಕೇಶನ್ ಬಳಕೆ  ಮುಂದುವರಿಸಬಹುದು” ಎಂದಿದೆ.

ಆದರೆ ಆಪಲ್ ಆಪ್ಯ್‌ ಸ್ಟೋರ್‌ನಲ್ಲಿ ಪೇಟಿಯಂ ಡೌನ್‌ಲೋಡ್ ಮಾಡಲು ಲಭ್ಯವಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...