Homeಅಂತರಾಷ್ಟ್ರೀಯಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಕಳೆದ ತಿಂಗಳು ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯನ್ನು ಬೆಂಬಲಿಸಿತ್ತು ಎಂದು ಕಳೆದ ತಿಂಗಳಷ್ಟೇ ಭಾರಿ ವಿವಾದಕ್ಕೊಳಗಾಗಿದ್ದ ಫೇಸ್‌ಬುಕ್ ಇದೀಗ ಮತ್ತೊಂದು ಸಮಸ್ಯೆಯನ್ನು ಮೈಗೆಳೆದು ಕೊಂಡಿದೆ. ಫೇಸ್‌ಬುಕ್‌ನ ಸಹ ಅಪ್ಲಿಕೇಶನ್‌ ಆದ ಇನ್ಸ್ಟಾಗ್ರಾಮ್ ತನ್ನ ಬಳಕೆದಾರರ ಮೊಬೈಲ್ ಫೋನಿನ ಕ್ಯಾಮರಾಗಳನ್ನು ಅನಧಿಕೃತವಾಗಿ ಬಳಸಿ ಬೇಹುಗಾರಿಕೆ ನಡೆಸುತ್ತಿದೆ ಎಂದು ಫೇಸ್‌ಬುಕ್‌ ಕಂಪೆನಿ ಮೇಲೆ ಮೊಕದ್ದಮೆ ಹೂಡಲಾಗಿದೆ.

ಫೋಟೋ ಹಂಚಿಕೆ ಅಪ್ಲಿಕೇಶನ್ ಆದ ಇನ್ಸ್ಟಾಗ್ರಾಮ್, ಐಫೋನ್ ಕ್ಯಾಮೆರಾಗಳನ್ನು ಆಪ್‌ ಬಳಸದ ಸಮಯದಲ್ಲೂ ಸಹ ತೆರೆಯುತ್ತಿದೆ ಎಂದು ಜುಲೈನಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದಾಗಿ ವಿವಾದ ಹುಟ್ಟಿಕೊಂಡಿತ್ತು. ಆದರೆ ಫೇಸ್‌ಬುಕ್ ಈ ವರದಿಗಳನ್ನು ನಿರಾಕರಿಸಿ, ಅಪ್ಲಿಕೇಷನ್‌ನಲ್ಲಿ ದೋಷಗಳಿವೆ, ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇದೀಗ ನ್ಯೂಜೆರ್ಸಿಯ ಬ್ರಿಟಾನಿ ಕಾಂಡಿಟಿ ಎಂಬ ಇನ್ಸ್ಟಾಗ್ರಾಮ್ ಬಳಕೆದಾರ ಸ್ಯಾನ್ ಫ್ರಾನ್ಸಿಸ್ಕೋದ ಫೆಡರಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅಪ್ಲಿಕೇಶನ್‌ ಕ್ಯಾಮೆರಾ ಬಳಕೆ ಮಾಡಿರುವುದು ಉದ್ದೇಶಪೂರ್ವಕವಾಗಿಯೆ ಆಗಿದೆ. ಬಳಕೆದಾರರ ಲಾಭದಾಯಕ ಮತ್ತು ಅಮೂಲ್ಯವಾದ ಡೇಟಾವನ್ನು ಸಂಗ್ರಹಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ಅವರು ಆರೋಪಿದ್ದಾರೆ.

ಫೇಸ್‌ಬುಕ್, ನಾನುಗೌರಿ, kannada news
PC: Reuters

“ತಮ್ಮ ಸ್ವಂತ ಮನೆಗಳ ಗೌಪ್ಯತೆ ಸೇರಿದಂತೆ ತಮ್ಮ ಬಳಕೆದಾರರ ಮೇಲೆ ಅತ್ಯಂತ ಖಾಸಗಿ ಮತ್ತು ನಿಕಟವಾದ ವೈಯಕ್ತಿಕ ಡೇಟಾವನ್ನು ಪಡೆದು ಅದನ್ನು ಮಾರ್ಕೆಟ್ ರಿಸರ್ಚ್‌ಗೆ ಬಳಕೆ ಮಾಡುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಫೇಸ್‌ಬುಕ್ ನಿರಾಕರಿಸಿದೆ.

ಕಳೆದ ತಿಂಗಳು ಸಲ್ಲಿಸಿದ ಮೊಕದ್ದಮೆಯೊಂದರಲ್ಲಿ, ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು. ಆದರೆ ಫೇಸ್‌ಬುಕ್ ಇದನ್ನು ನಿರಾಕರಿಸಿ ಇನ್‌ಸ್ಟಾಗ್ರಾಮ್ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...