Homeಕರ್ನಾಟಕರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ...

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದಿನನಿತ್ಯ‌ ತರಗತಿಗಳನ್ನು ಪ್ರಾರಂಭಿಸಲು ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

ಪ್ರತಿವರ್ಷ ಜೂನ್ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಅದು ಈ ವರ್ಷ ಆಗಲಿಲ್ಲ. ಆದ್ದರಿಂದ, ಸೆಪ್ಟೆಂಬರ್ ಅಂತ್ಯದ ವೇಳೆಗೆ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಈ ಬಾರಿ ಖಾಸಗಿ ಶಾಲೆಗಳು ಕೇವಲ ಒಂದು ಟರ್ಮ್ ಫೀಸ್ ಮಾತ್ರ ಪಡೆಯಬೇಕು ಎಂಬ ಆದೇಶವನ್ನು ಸರ್ಕಾರ ಜಾರಿಗೆ ತಂದಿದೆ. ಆಗೊಮ್ಮೆ ಖಾಸಗಿ ಶಾಲೆಗಳಿಂದ ಪೋಷಕರಿಗೆ ಸಮಸ್ಯೆ ಆದರೆ ಡಿಡಿಪಿಐ, ಬಿಇಓ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಜೊತೆಗೆ 2020-21ರ ಶೈಕ್ಷಣಿಕ ವರ್ಷಕ್ಕೆ ಶಾಲೆಗಳು ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...