Homeಮುಖಪುಟಮೊಹರಂ ಮೆರವಣಿಗೆ: NSA ಪ್ರಕರಣಗಳನ್ನು ಕೈಬಿಟ್ಟ ಮಧ್ಯಪ್ರದೇಶ ಹೈಕೋರ್ಟ್

ಮೊಹರಂ ಮೆರವಣಿಗೆ: NSA ಪ್ರಕರಣಗಳನ್ನು ಕೈಬಿಟ್ಟ ಮಧ್ಯಪ್ರದೇಶ ಹೈಕೋರ್ಟ್

ಇಂದೋರ್ ಜಿಲ್ಲಾಧಿಕಾರಿ‌ ಐವರ ಮೇಲೆ ವಿಧಿಸಿರುವ NSA ಕಾಯ್ದೆ ’ಮಾಧ್ಯಮ ವಿಚಾರಣೆ’ಯನ್ನು ಆಧರಿಸಿದೆ ಎಂದಿದೆ.

- Advertisement -
- Advertisement -

ಆಗಸ್ಟ್ 30 ರಂದು ಮಧ್ಯಪ್ರದೇಶದ ಭೋಪಾಲ್‌ನ ಇಂದೋರ್‌ನಲ್ಲಿ ಮೊಹರಂ ಮೆರವಣಿಗೆ ನಡೆಸಿದ್ದಕ್ಕಾಗಿ ಐದು ಜನರ ಮೇಲೆ ಇಂದೋರ್ ಜಿಲ್ಲಾಧಿಕಾರಿ ವಿಧಿಸಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಪ್ರಕರಣಗಳನ್ನು ಮಧ್ಯಪ್ರದೇಶ ಹೈಕೋರ್ಟ್ ಕೈಬಿಟ್ಟಿದೆ.

ಪ್ರಕರಣ ಸಂಬಂಧದ ಅರ್ಜಿಗಳನ್ನು ಪರಿಶೀಲಿಸಿದ ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ನ್ಯಾಯಪೀಠವು, ಇಂದೋರ್ ಜಿಲ್ಲಾಧಿಕಾರಿ‌ ಐವರ ಮೇಲೆ ವಿಧಿಸಿರುವ NSA ಕಾಯ್ದೆ “ಮಾಧ್ಯಮ ವಿಚಾರಣೆ”ಯನ್ನು ಆಧರಿಸಿದೆ ಎಂದಿದೆ.

ಇದನ್ನೂ ಓದಿ: ಬಂಧನ ಕೇಂದ್ರವಾಗಿ SC/ST ಹಾಸ್ಟೆಲ್: ಯೋಜನೆ ಕೈಬಿಟ್ಟ ಯುಪಿ ಸರ್ಕಾರ

12 ಪುಟಗಳ ತೀರ್ಪು ನೀಡಿರುವ ನ್ಯಾಯಮೂರ್ತಿಗಳಾದ ಎಸ್.ಸಿ.ಶರ್ಮಾ ಮತ್ತು ಶೈಲೇಂದ್ರ ಶುಕ್ಲಾ ಅವರ ವಿಭಾಗೀಯ ಪೀಠವು, ಮಾಜಿ ಕಾರ್ಪೋರೇಟರ್ ಉಸ್ಮಾನ್ ಪಟೇಲ್ (60) ಇಸ್ಮಾಯಿಲ್ ಪಟೇಲ್ (45), ಅನ್ಸರ್ ಪಟೇಲ್ (38) , ಮೊಹಮ್ಮದ್ ಅಲಿ ಪಟೇಲ್ (65) ಶಹಜಾದ್ ಪಟೇಲ್ (28) ಅವರ ಮೇಲಿದ್ದ NSA ಆರೋಪವನ್ನೂ ನ್ಯಾಯಾಲಯ ಕೈಬಿಟ್ಟು, ಜಾಮೀನು ನೀಡಿದೆ.

ಉಸ್ಮಾನ್ ಪಟೇಲ್ ಇಂದೋರ್‌ನ ವಾರ್ಡ್ ನಂಬರ 38 ರ ಮಾಜಿ ಕಾರ್ಪೊರೇಟರ್ ಆಗಿದ್ದವರು.  ಈ ವರ್ಷದ ಫೆಬ್ರವರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ರಾಜೀನಾಮೆ ನೀಡಿದ್ದರು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ನಿಲುವು ತೆಗೆದುಕೊಂಡು ಕಾಂಗ್ರೆಸ್ ಸೇರಿದ್ದರು.

ಇಂದೋರ್ ನಗರದ ಖಜ್ರಾನಾ ಪ್ರದೇಶದಲ್ಲಿ ನಿಷೇಧದ ಹೊರತಾಗಿಯೂ ಮೊಹರಂ ಮೆರವಣಿಗೆ ಆಯೋಜಿಸಿದ್ದಕ್ಕಾಗಿ ಮುಸ್ಲಿಂ ಸಮುದಾಯದ 28 ಜನರ ವಿರುದ್ಧ ಇಂದೋರ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಎಫ್‌ಐಆರ್ ದಾಖಲಿಸಿದ ಕೆಲವು ಗಂಟೆಗಳ ಬಳಿಕ ಜಿಲ್ಲಾಧಿಕಾರಿ ಈ ಐದು ಜನರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ವಿಧಿಸಿದರೆ, 23 ಜನರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, 270 ಮತ್ತು 151ರ ಅಡಿಯಲ್ಲಿ ಬಂಧಿಸಲಾಗಿತ್ತು.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಇಂದೋರ್ ಜಿಲ್ಲಾ ಮ್ಯಾಜಿಸ್ಟ್ರೇಟ್ “ಮಾಧ್ಯಮ ವಿಚಾರಣೆಯ” ಆಧಾರದ ಮೇಲೆ ತನ್ನ ಅಭಿಪ್ರಾಯವನ್ನು ರೂಪಿಸಿಕೊಂಡು, ಐದು ಜನರ ವಿರುದ್ಧ NSA ಚಾರ್ಜ್ ವಿಧಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವು ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಗಳನ್ನೇ ಉಲ್ಲೇಖಿಸಿದೆ ಎಂದು ಹೇಳಿದೆ.

ಈ ದಿನಗಳಲ್ಲಿ ಮಾಧ್ಯಮ ವಿಚಾರಣೆ ಬಹಳ ಸಾಮಾನ್ಯವಾಗಿದೆ ಮತ್ತು ಈಗ ತೀರ್ಪು ನೀಡುವ ಅಧಿಕಾರಿಗಳು ಮಾಧ್ಯಮ ಪ್ರಯೋಗಗಳ ಆಧಾರದ ಮೇಲೆ ತಮ್ಮ ತೀರ್ಪುಗಳನ್ನು ನೀಡುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...