Homeಮುಖಪುಟ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ - ಹರ್ಸಿಮ್ರತ್ ಕೌರ್ ಬಾದಲ್

- Advertisement -
- Advertisement -

ಕೃಷಿ ಮಸೂದೆಗಳ ಅಂಗೀಕಾರದ ವಿರುದ್ಧ ಪಂಜಾಬ್‌ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಇಂದು 70 ವರ್ಷದ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಮಾನ್ಸಾ ಜಿಲ್ಲೆಯ ಅಕ್ಕನ್‌ವಾಲಿ ಗ್ರಾಮದ ನಿವಾಸಿ ಪ್ರೀತಮ್ ಸಿಂಗ್ ಪ್ರತಿಭಟನೆಯಲ್ಲಿ ನಿನ್ನೆ ವಿಷ ಸೇವಿಸಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 15 ರಿಂದ ಪಂಜಾಬ್‌ನ ಮುಕ್ತರ್‌ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹಣ್) ಆಯೋಜಿಸಿರುವ ಪ್ರತಿಭಟನೆಯಲ್ಲಿ ಪ್ರೀತಮ್ ಸಿಂಗ್ ಭಾಗವಹಿಸುತ್ತಿದ್ದರು. ಬಾದಲ್ ಗ್ರಾಮ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಸ್ವಗ್ರಾಮ.

ಆಡಳಿತವು ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡುವಂತೆ ಏಕ್ತಾ ಉಗ್ರಾಹಣ್ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಒತ್ತಾಯಿಸಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ದೇಶದಲ್ಲಿ ಕಳೆದ ಒಂದು ವಾರದಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೊಸ ಕೃಷಿ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾಪೋರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತವೆ ಎಂದು ಆರೋಪಿಸಿವೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಈ ನಡುವೆ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಹೇಳಿಕೆಯಲ್ಲಿ ಯೂಟರ್ನ್‌ ಹೊಡೆದಿದ್ದಾರೆ.

ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿದ ಹರ್ಸಿಮ್ರತ್ ಕೌರ್ ಬಾದಲ್ ಈ ಮೂರು ಮಸೂದೆಗಳನ್ನು “ರೈತ ವಿರೋಧಿ” ಎಂದು ಕರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

“ನಾನು ಅವುಗಳನ್ನು ರೈತ ವಿರೋಧಿ ಮಸೂದೆಗಳು ಎಂದು ಕರೆಯುತ್ತಿಲ್ಲ. ರೈತರು ಅವರನ್ನು ರೈತ ವಿರೋಧಿ ಎಂದು ಕರೆಯುತ್ತಿದ್ದಾರೆ. ರೈತರ ಅನುಕೂಲಕ್ಕಾಗಿ ಮಸೂದೆಗಳು ಬಂದಿವೆ. ಅದು ಅವರ ಲಾಭದಲ್ಲಿದೆ ಎಂದು ರೈತರು ನಂಬಬೇಕು” ಎಂದಿದ್ದಾರೆ.

ಆದರೆ, ಗುರುವಾರ ರಾಜೀನಾಮೆ ಘೋಷಿಸಿದ ನಂತರ, ಹರ್ಸಿಮ್ರತ್ ಕೌರ್ ಬಾದಲ್ “ರೈತ ವಿರೋಧಿ ಸುಗ್ರೀವಾಜ್ಞೆಗಳು ಮತ್ತು ಶಾಸನಗಳನ್ನು ವಿರೋಧಿಸಿ ನಾನು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...