Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ತಾನು ಬಿಜೆಪಿ ಬೆಂಬಲಿಸುವವಳಾಗಿದ್ದು, ಬಿಜೆಪಿ-ಶಿವಸೇನೆ ಮೈತ್ರಿಯಿಂದ ಬಲವಂತವಾಗಿ ಶಿವಸೇನೆಗೆ ಮತನೀಡುವಂತಾಯಿತು ಎಂದಿದ್ದರು.

- Advertisement -
- Advertisement -

ಸಧ್ಯ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌, ಮಹರಾಷ್ಟ್ರದ ಶಿವಸೇನೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವುದನ್ನು ಮುಂದುವರೆಸಿದ್ದು, ಇತ್ತೀಚೆಗೆ ಟೈಮ್ಸ್‌ ನೌ ಸಂದರ್ಶನವೊಂದರಲ್ಲಿ, ’ತಾನು ಮನಸ್ಸಿಲ್ಲದೆ ಬಲವಂತವಾಗಿ ಶಿವಸೇನೆಗೆ ಮತಚಲಾಯಿಸಿದ್ದೇನೆ’ ಎಂದು ಹೇಳಿದ್ದಾರೆ.

ಕಂಗನಾ ತನ್ನ ಸಂದರ್ಶನದಲ್ಲಿ, ನಾನು ಬಿಜೆಪಿಯನ್ನು ಬೆಂಬಲಿಸುವವಳು, ಆದರೆ ಶಿವಸೇನೆಗೆ ಯಾಕೆ ಮತ ಹಾಕಬೇಕು? ಶಿವಸೇನೆ ಮತ್ತು ಬಿಜೆಪಿ ಮೈತ್ರಿಯಾಗಿದ್ದರಿಂದ ಬಾಂದ್ರಾದಲ್ಲಿ ಬಿಜೆಪಿಯ ಆಯ್ಕೆ ಇಲ್ಲದೆ ಶಿವಸೇನೆಗೆ ಮತ ಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಫ್ಯಾಕ್ಟ್‌‌ಚೆಕ್

ಇಂಡಿಯಾ ಟುಡೆ ಉಪ ಸಂಪಾದಕ ಕಮಲೇಶ್ ಸುತಾರ್ ಕಂಗನಾ ಅವರ ಪ್ರತಿಪಾದನೆ ಸುಳ್ಳು ಎಂದು ಕೆಲವು ವಿಚಾರಗಳ ಬಗ್ಗೆ ಗಮನ ಸೆಳೆದಿದ್ದಾರೆ. “ಮಹಾರಾಷ್ಟ್ರ ಚುನಾವಣಾ ಆಯೋಗದ ಪ್ರಕಾರ, ಕಂಗನಾ ಬಾಂದ್ರಾ ಪಶ್ಚಿಮ ಕ್ಷೇತ್ರದ ಮತದಾರಾಗಿದ್ದಾರೆ. ಇಲ್ಲಿ 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಆಶಿಶ್ ಶೆಲಾರ್ ಶಿವಸೇನೆ-ಬಿಜೆಪಿ ಅಭ್ಯರ್ಥಿಯಾಗಿದ್ದರು. ಅಷ್ಟೇ ಅಲ್ಲದೆ ಲೋಕಸಭೆಯಲ್ಲಿ ಕೂಡಾ ಬಿಜೆಪಿಯ ಪೂನಂ ಮಹಾಜನ್ ಇಲ್ಲಿ ಸ್ಫರ್ಧಿಸಿ ಜಯಗಳಿಸಿದರು” ಎಂದು ಹೇಳಿದ್ದರು.

 

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಕಮಲೇಶ್‌ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಮಲೇಶ್‌ ಸುಳ್ಳು ಹರಡುತ್ತಿದ್ದಾರೆ, ಆದ್ದರಿಂದ ಕಾನೂನು ಕ್ರಮದ ನೋಟಿಸು ಕಳುಹಿಸುತ್ತೇನೆ ಎಂದ ಕಂಗನಾ, “ನಾನು ಲೋಕಸಭಾ ಚುನಾವಣೆಯ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿದ್ದೇನೆ ಆದರೆ ಅವರು ಉದ್ದೇಶಪೂರ್ವಕವಾಗಿ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಅವರು ಬರೆದಿದ್ದಾರೆ.

ಇದಾಗ್ಯೂ, ಕಂಗನಾ ಶಿವಸೇನೆಗೆ ಬಂಲವಂತವಾಗಿ ಮತ ಚಲಾಯಿಸಿದ್ದೇನೆ ಎಂಬ ಹೇಳಿಕೆಯು ನಿಜವಲ್ಲ. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳೆರಡರಲ್ಲೂ ಕಂಗನಾ ಮತ ಚಲಾಯಿಸಲು ನೋಂದಾಯಿಸಲಾಗಿರುವ ಕ್ಷೇತ್ರಗಳ ಅಭ್ಯರ್ಥಿಗಳು ಬಿಜೆಪಿಗೆ ಸೇರಿದವರಾಗಿದ್ದು, ಇಲ್ಲಿ ಚುನಾವಣೆಯ ವೇಳೆ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು.

ಲೋಕಸಭಾ ಚುನಾವಣೆ

2019 ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ಖಾರ್‌ನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದರು.

ಖಾರ್ ಮುಂಬೈನ ಉಪನಗರ ಜಿಲ್ಲೆಯಲ್ಲಿದ್ದು, ಇದು ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವಾಂಡ್ರೆ (ಬಾಂದ್ರಾ) ಪಶ್ಚಿಮ ವಿಧಾನಸಭಾ ಕ್ಷೇತ್ರದ ಭಾಗವಾಗಿದೆ. ‘General Information>List of Polling Stations’ ಅಡಿಯಲ್ಲಿ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಓದುಗರು ಇದನ್ನು ಸ್ವಯಂ ಪರಿಶೀಲಿಸಬಹುದು.

ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು ನಿಜವೆ?

ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ-ಶಿವಸೇನೆ ಮೈತ್ರಿಯ ಅಭ್ಯರ್ಥಿ ಬಿಜೆಪಿಯ ಪೂನಂ ಮಹಾಜನ್ ವಿಜಯಶಾಲಿಯಾಗಿದ್ದರು.

ಆದ್ದರಿಂದ ಮೈತ್ರಿಯಿಂದಾಗಿ ತಾನು ಮನಸ್ಸಿಲ್ಲದೆ ಶಿವಸೇನೆಗೆ ಮತ ಚಲಾಯಿಸಿದ್ದೇನೆ ಎಂದು ಕಂಗನಾ ರಾಣಾವತ್‌ ಹೇಳಿರುವುದು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ವಿಧಾನಸಭಾ ಚುನಾವಣೆ

ಅಮರ್ ಉಜಲಾ ವರದಿಯ ಪ್ರಕಾರ, 2019 ರ ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಂಗನಾ ಮುಂಬೈನಲ್ಲಿ ಇರಲಿಲ್ಲ. ಆದರೆ ಅವರು ಅಲ್ಲಿದ್ದು ಮತ ಚಲಾಯಿಸಿದ್ದರೂ ಅದು ಬಿಜೆಪಿಯ ರಾಜಕಾರಣಿಗೆ ಆಗಿರುತ್ತಿತ್ತು. ಅಂದು ಬಿಜೆಪಿಯ ಆಶಿಶ್ ಶೆಲಾರ್ ಬಾಂದ್ರಾ ವೆಸ್ಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ-ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿದ್ದರು ಹಾಗೂ ಗೆದ್ದರು.

ಕಂಗನಾ ಟಿವಿ ಸಂದರ್ಶನದಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಕೂಡಾ ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...