Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...