Homeಕರ್ನಾಟಕಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು - ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು – ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಸರ್ಕಾರದ ಈ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಪ್ರಧಾನವಾಗಿ ಬೆಳೆಯಲಾಗುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅಧಿಕ ಭೂಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದು ಈಗ ಕಟಾವಿಗೆ ಬಂದಿದೆ. ಮಳೆ ಕಾಲ ಕಾಲಕ್ಕೆ ಸುರಿದ ಪರಿಣಾಮ ಮೆಕ್ಕೆಜೋಳ ಉತ್ತಮ ಇಳುವಳಿ ಬಂದಿದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯೂ ಸಿಗದೆ ರೈತರು ಕಂಗಾಲಾಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ರೈತರಿಂದ ನೇರವಾಗಿ ಮೆಕ್ಕೆಜೋಳ ಕೊಳ್ಳಲು ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯ ಕೇಳಿಬಂದಿದೆ.

ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ, ಬೆಳಗಾವಿ ಜಿಲ್ಲೆಯ ಹಾವೇರಿ, ಮಧ್ಯಕರ್ನಾಟಕದ ಶಿವಮೊಗ್ಗ ಭಾಗದಲ್ಲಿ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆಯಲಾಗಿದೆ. ಕಡಿಮೆ ನೀರಿನಲ್ಲಿ, ಕಡಿಮೆ ಸಮಯದಲ್ಲಿ ಬೆಳೆ ಕೈಬರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ರೈತರು ಮೆಕ್ಕೆಜೋಳದ ಮೊರೆಹೋಗಿದ್ದರು. ಎಲ್ಲಾ ಕಡೆ ಬೆಳೆ ಚೆನ್ನಾಗಿ ಬಂದಿದ್ದು ಕಟಾವು ಕೂಡ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಮತ್ತು ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಶಾಸಕ ಆರ್‌‌. ವಿ. ದೇಶಪಾಂಡೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ಬರೆದಿರುವ ಪತ್ರ

ಕ್ವಿಂಟಾಲ್ ಮೆಕ್ಕೆಜೋಳ ಕೇವಲ 1300 ರೂಗಳಿಗೆ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1860 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೂ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಷ್ಟದ ಕಾಲದಲ್ಲಿ ಸ್ವಲ್ಪಮಟ್ಟಿನ ಲಾಭವಾದರೂ ಬರಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದು ನಿರಾಸೆ ತರಿಸಿದೆ. ರಾಜ್ಯದ ಒಂದೊಂದು ಜಿಲ್ಲೆಯಲ್ಲೂ ಒಂದೊಂದು ಬೆಲೆಯಡಿ ಮೆಕ್ಕೆಜೋಳ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: (ರೈತ) ಚಳುವಳಿಯ ಬಿಕ್ಕಟ್ಟು : ಕೆ. ಪಿ. ಸುರೇಶ್

ಉತ್ತರ ಕರ್ನಾಟಕದ ರಾಯಚೂರು, ಗದಗ, ಬಾಗಲಕೋಟೆ ಭಾಗದಲ್ಲಿ 1400 ರೂಗಳಿಗೆ ಮೆಕ್ಕೆಜೋಳಕ್ಕೆ ಬೆಲೆ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1300 ರೂ, ತುಮಕೂರು ಜಿಲ್ಲೆಯಲ್ಲಿ 1500 ರೂ ಹೀಗೆ ಥರಾವರಿ ಬೆಲೆಯಲ್ಲಿ ಖರೀದಿಸುತ್ತಿದ್ದರೂ ಬೆಂಬಲ ಬೆಲೆಗಿಂತ 400-500 ರೂಪಾಯಿ ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಟದಿಂದಾಗಿ ಎಲ್ಲಾ ಬೆಳೆಗಳಲ್ಲೂ ನಷ್ಟ ಅನುಭವಿಸಿದ್ದ ರೈತರು ಈಗ ಬೆಂಬಲ ಬೆಲೆಯೂ ಸಿಗದೆ ತೊಂದರೆಗೆ ಸಿಲುಕಿದ್ದು ಸರ್ಕಾರ ರೈತರಿಂದ ನೇರ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರಿಗೆ ಪತ್ರ ಬರೆದು ಮೆಕ್ಕೇಜೋಳವನ್ನು ಕೇವಲ 1300 ರೂಗಳಿಗೆ ಖರೀದಿ ಮಾಡುತ್ತಿದ್ದಾರೆ. ರೈತರಿಗೆ ಸೂಕ್ತ ಬೆಲೆಯೇ ಸಿಗುತ್ತಿಲ್ಲ. ಇದರಿಂದ ಮೆಕ್ಕೆಜೋಲ ಬೆಳೆದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ಮೆಕ್ಕೆಜೋಳವನ್ನು ಕೊಳ್ಳಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ 1860 ರೂಗಳಿಗೆ ಮೆಕ್ಕೇಜೋಳ ಖರೀದಿಸಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಪ್ರತಿಹೆಕ್ಟೇರ್ ಗೆ 37.50 ಕ್ವಿಂಟಾಲ್ ಬೆಳೆ ನಿರೀಕ್ಷಿಸಲಾಗಿದೆ. ಅಂದರೆ 3500 ಹೆಕ್ಟೇರ್ ಭೂಪ್ರದೇಶದಲ್ಲಿ 2,43,750 ಕ್ವಿಂಟಾಲ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಸಹಕಾರ ಸಚಿವರು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುವುದನ್ನು ರೈತರು ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ರೈತರ ಬಗ್ಗೆ ಉತ್ತರ ಕರ್ನಾಟಕ ಭಾಗದ ಯಾವುದೇ ಜನ ಪ್ರತಿನಿಧಿಗಳು, ಶಾಸಕರು ಸಚಿವರು ಮತ್ತು ಸಂಸದರೂ ಕೂಡ ರೈತರ ಸಮಸ್ಯೆಗಳ ಕುರಿತು ದನಿ ಎತ್ತಿಲ್ಲ. ಮೆಕ್ಕೆಜೋಳವನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನೂ ಯಾರೊಬ್ಬರೂ ಮಾಡಿಲ್ಲದಿರುವುದು ಶೋಚನೀಯ ಸಂಗತಿ ಎಂಬ ಟೀಕೆ ವ್ಯಕ್ತವಾಗಿದೆ.

ಶಾಸಕ ಆರ್‌‌. ವಿ. ದೇಶಪಾಂಡೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ 5000 ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ್ದ ರೈತರು ಸರ್ಕಾರಕ್ಕೆ ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳನ್ನೂ ನೀಡಿದ್ದರು. ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ದೂರಿದ್ದಾರೆ. ಒಂದು ಕಡೆ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸರ್ಕಾರವೂ ನೇರವಾಗಿ ಖರೀದಿಸಿ ರೈತರ ಸಂಕಷ್ಟವನ್ನು ನಿವಾರಿಸುವ ಗೋಜಿಗೆ ಹೋಗುತ್ತಿಲ್ಲ. ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...