Homeಮುಖಪುಟಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರವರ ಬಂಧನವನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (WPI) ಇಂದು ಪ್ರತಿಭಟನೆ ನಡೆಸಿದೆ. ಕಲಬುರ್ಗಿ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ದ್ವೇಷ ಭಾಷಣಗಳನ್ನು ಮಾಡಿ ಹಿಂಸಾಚಾರವನ್ನು ಪ್ರಚೋದಿಸಿದ ಉನ್ನತ ಬಿಜೆಪಿ ಮುಖಂಡರನ್ನು ರಕ್ಷಿಸಿ, ಸಿಎಎ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಯುವಜನಗಳ ಮೇಲೆ ಗುರಿಯಿಡುತ್ತಿದೆ. ಸಿಎಎ-ವಿರೋಧಿ ಪ್ರತಿಭಟನೆಗಳು ಮತ್ತು ಕೋಮು ಹಿಂಸಾಚಾರವನ್ನು ತಳಕು ಹಾಕುವ ದೇಶದ ಗೃಹ ಸಚಿವಾಲಯ ಮತ್ತು ದೆಹಲಿ ಪೋಲೀಸರ ಅತ್ಯಂತ ಕಪೋಲಕಲ್ಪಿತ ಆವೃತ್ತಿಯನ್ನು ತೋರಿಸಿ ಬಂಧಿಸಲಾಗುತ್ತಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಬಂಧನಕ್ಕೆ ಟ್ವಿಟರ್‌ನಲ್ಲಿ ಖಂಡನೆ: #StandWithUmarKhalid ಟ್ರೆಂಡಿಂಗ್

“UAPAಯನ್ನು ಸಾಮಾನ್ಯ ನ್ಯಾಯ ಪ್ರಕ್ರಿಯೆಯನ್ನು ತಡೆಗಟ್ಟಲು ಬಳಸಲಾಗುತ್ತಿದೆ. ಸಾಮಾನ್ಯ ಪ್ರಕ್ರಿಯೆಯ ಮೂಲಕ ಅವರು ಜಾಮೀನಿನಲ್ಲಿ ಹೊರಬರಬಹುದಿತ್ತು. ಏಕೆಂದರೆ ಹಲವಾರು ಕೆಳಗಣ ನ್ಯಾಯಾಲಯಗಳು ಹೇಳಿರುವಂತೆ ಅವರ ಯಾರ ವಿರುದ್ಧವೂ ಹಿಂಸಾಚಾರವನ್ನು ಪ್ರಚೋದಿಸುವ ಎಳ್ಳಷ್ಟೂ ಸಾಕ್ಷ್ಯ ಇರುವುದಿಲ್ಲ. ಈ ಬಂಧನಗಳು ಅಸಮ್ಮತಿ ವ್ಯಕ್ತಪಡಿಸುವ, ಪ್ರಜಾಪ್ರಭುತ್ವದ ಹಕ್ಕಿಗೆ ಇರುವ ಸಂವಿಧಾನಿಕ ಖಾತ್ರಿಯ ಮೇಲೆ ನಡೆಸಿರುವ ಒಂದು ಆಕ್ರಮಣವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಭಿಪ್ರಾಯ ಪಟ್ಟಿದೆ.

CAA ವಿರುದ್ಧ ಪ್ರತಿಭಟಿಸುವುದು, ಜನರ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಪ್ರಜಾಪ್ರಭುತ್ವದ ಹಕ್ಕು ಎಂಬುದನ್ನು ಸರ್ಕಾರ ಮರೆಯಬಾರದು. ಆದ್ದರಿಂದ ಉಮರ್ ಖಾಲಿದ್ ಸೇರಿದಂತೆ ಎಲ್ಲಾ ಅಮಾಯಕ ಕಾರ್ಯಕರ್ತರನ್ನು ಬೇಷರತ್ತಾಗಿ, ನಷ್ಟ ಪರಿಹಾರದೊಂದಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ

ಅಧಿಕಾರ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತವರ ರಾಜಕೀಯ ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ, ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶಾಂತಿಯುತ ರಾಜಕೀಯ ಪ್ರತಿಭಟನೆಗಳನ್ನು ಕ್ರಿಮಿನಲ್ ಅಪರಾಧ ಎಂದು ಬಿಂಬಿಸುವ ಸಂವಿಧಾನ ವಿರೋಧಿ ನಿಲುವನ್ನು ಕೂಡಲೇ ನಿಲ್ಲಿಸಬೇಕು. ಸುಳ್ಳು ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಕಳುಹಿಸಲಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ, WPI ಜಿಲ್ಲಾಧ್ಯಕ್ಷರಾದ ಸೈಯದ್ ಅಬ್ದುಲ್ ಬಾರಿ, WPI ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, WPI ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಬಿನ್ ಅಹ್ಮದ್, ಮುನಿರ್ ಹಾಸ್ಮಿ, ಸಲೀಂ ಸದರಿ, ಇನ್ನಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...