Homeಮುಖಪುಟ97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ...

97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ- ಗೋಯಲ್

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗಾಗಿ ವ್ಯವಸ್ಥೆ ಮಾಡಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಸುಮಾರು 97 ಜನ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಅಂಕಿಅಂಶಗಳನ್ನು ಸಲ್ಲಿಸಿದೆ.

ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯನ್ ಶುಕ್ರವಾರ ಸದಸನದಲ್ಲಿ ಕೇಳಿದ ಪ್ರಶ್ನೆಗೆ, ರೈಲ್ವೆ ಸಚಿವ ಪಿಯೂಷ್ ಗೋಯಲ್, ಲಿಖಿತ ಉತ್ತರದಲ್ಲಿ ಸಂಸತ್ತಿನ ಮೇಲ್ಮನೆಗೆ ಅಂಕಿಅಂಶಗಳನ್ನು ನೀಡಿದರು.

“ರಾಜ್ಯ ಪೊಲೀಸರು ಒದಗಿಸಿದ ಮಾಹಿತಿಯ ಆಧಾರದ ಮೇಲೆ, ಪ್ರಸ್ತುತ ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾಗ ಸೆಪ್ಟಂಬರ್,09,2020 ರವರೆಗೆ 97 ಜನರು ಸಾವನ್ನಪ್ಪಿದ್ದಾರೆ” ಎಂಬುದಾಗಿ ಸಚಿವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

“ರಾಜ್ಯ ಪೊಲೀಸರು, Cr.PCಯ ಸೆಕ್ಷನ್ 174 ರ ಅಡಿಯಲ್ಲಿ ಈ ಸಾವುಗಳನ್ನು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ರಾಜ್ಯ ಪೊಲೀಸರು, 87 ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ” ಎಂದು ಸಚಿವರು ಹೇಳಿದರು.

“ಈವರೆಗೆ ಒಟ್ಟು 51 ಮರಣೋತ್ತರ ವರದಿಗಳನ್ನು ಆಯಾ ರಾಜ್ಯ ಪೊಲೀಸ್ ಪಡೆಗಳಿಂದ ಪಡೆಯಲಾಗಿದ್ದು, ಇದರಲ್ಲಿ, ಸಾವಿಗೆ ಕಾರಣ, ಹೃದಯ ಸ್ತಂಭನ/ಹೃದಯ ಕಾಯಿಲೆ/ಮೆದುಳಿನ ರಕ್ತಸ್ರಾವ/ಮೊದಲೇ ಅಸ್ತಿತ್ವದಲ್ಲಿರುವ ದೀರ್ಘಕಾಲದ ಕಾಯಿಲೆ/ದೀರ್ಘಕಾಲದ ಶ್ವಾಸಕೋಶದ ಕಾಯಿಲೆ/ದೀರ್ಘಕಾಲದ ಯಕೃತ್ತಿನ ಕಾಯಿಲೆ ಇತ್ಯಾದಿ, ಎಂದು ಕಂಡುಬಂದಿದೆ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಅದಾಗ್ಯೂ “ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ಈ ಹಿಂದೆ ತಿಳಿಸಿತ್ತು.

ಲಾಕ್‌ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಮರಳಿಸಲು ಶ್ರಮಿಕ್ ವಿಶೇಷ ರೈಲುಗಳು ಮೇ 1 ರಂದು ಕಾರ್ಯಾಚರಣೆ ಆರಂಭಿಸಿದ್ದವು.

ಒಟ್ಟಾರೆಯಾಗಿ, 4,621 ಶ್ರಮಿಕ್ ವಿಶೇಷ ರೈಲುಗಳು ಮೇ 1 ಮತ್ತು ಆಗಸ್ಟ್ 31 ರ ನಡುವೆ ಸಂಚರಿಸಿದ್ದು, 6,319,000 ಪ್ರಯಾಣಿಕರನ್ನು ತಮ್ಮ ರಾಜ್ಯಗಳಿಗೆ ಕರೆದೊಯ್ಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

“ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ” ಗೋಯಲ್ ಹೇಳಿದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದನ್ನೂ ಓದಿ:  ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ:  ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಇದನ್ನೂ ಓದಿ:  ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...