Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...